ಸುಬ್ರಮಣ್ಯನ್ ಸ್ವಾಮಿ 
ಪ್ರಧಾನ ಸುದ್ದಿ

ಅಮ್ಮ ಬಿಡುಗಡೆ ವಿರುದ್ಧ ಸ್ವಾಮಿ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ

ಮಿತಿಮೀರಿದ ಆಸ್ತಿ ಪ್ರಕರಣದಲ್ಲಿ ಎ ಐ ಡಿ ಎಂ ಕೆ ಅಧಿನಾಯಕಿ ಜೆ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ

ಚೆನ್ನೈ: ಮಿತಿಮೀರಿದ ಆಸ್ತಿ ಪ್ರಕರಣದಲ್ಲಿ ಎ ಐ ಡಿ ಎಂ ಕೆ ಅಧಿನಾಯಕಿ ಜೆ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಸೂಚನೆಯನ್ನು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ನೀಡಿದ್ದಾರೆ.

"ನಾನು ಸುಪ್ರೀಮ್ ಕೋರ್ಟ್ ಗೆ ಸಲ್ಲಿಸಲಿರುವ ಮೇಲ್ಮನಿವಿಯಿಂದ ಜಯಲಲಿತಾ ಮಿತಿಮೀರಿದ ಆಸ್ತಿ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು 'ಅಂಕಗಣಿತದ ತಪ್ಪುಗಳ ದುರಂತ' ಎಂದು ಸಾಬೀತುಪಡಿಸಲಿದೆ. ಅವರು ಮತ್ತೆ ಮುಖ್ಯಮಂತ್ರಿಯಾದರೆ ರಾಜೀನಾಮೆ ನೀಡಬೇಕಗುತ್ತದೆ" ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.


ಈ ತೀರ್ಪು ಜಯಲಲಿತ ಮತ್ತೆ ಮುಖ್ಯಮಂತ್ರಿಯಾಗುವುದಕ್ಕೆ ಹಾದಿಯನ್ನು ಸುಗಮಗೊಳಿಸಿದೆ.

ಈ ಪ್ರಕರಣದ ಮೂಲ ದೂರುದಾರ ಸ್ವಾಮಿ. ೧೯೯೬ ರಲ್ಲೇ ಜಯಲಲಿತಾ ವಿರುದ್ಧ ಸ್ವಾಮಿ ದೂರು ಸಲ್ಲಿಸಿದ್ದರು. ತದನಂತರ ಡಿ ಎಂ ಕೆ ೬೬.೫ ಕೋಟಿಯ ಮಿತಿಮೀರಿದ ಆಸ್ತಿ ಪ್ರಕರಣವನ್ನು ದಾಖಲಿಸಿತ್ತು. ಇದರಿಂದ ವಿಷೇಶ ನ್ಯಾಯಾಲಯ ಜಯಲಲಿತಾ ತಪ್ಪಿತಸ್ಥರೆಂದು ಕಳೆದ ಸೆಪ್ಟಂಬರ್ ನಲ್ಲಿ ತೀರ್ಪು ನೀಡಿತ್ತು.

ಕರ್ನಾಟಕ ಉಚ್ಛ ನ್ಯಾಯಾಲಯ ವಿಶೇಷ ನ್ಯಾಯಲಾಯದ ತೀರ್ಪನ್ನು ಬದಲಿಸಿ ಜಯಾ ನಿರ್ದೋಷಿ ಎಂದು ನೆನ್ನೆ ತೀರ್ಪು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT