ಜಯಲಲಿತಾ 
ಪ್ರಧಾನ ಸುದ್ದಿ

ಜಯಲಲಿತಾ ಮನೆಗೆ ತಮಿಳುನಾಡು ಸಿಎಂ ಭೇಟಿ, ಇಂದೇ ರಾಜಿನಾಮೆ ಸಾಧ್ಯತೆ

ತಮಿಳುನಾಡು ಮುಖ್ಯಮಂತ್ರಿ ಓ.ಪನ್ನೀರ್ ಸೇಲ್ವಂ ಸೇರಿದಂತೆ ಅವರ ಸಂಪುಟದ 19 ಸಚಿವರು ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಓ.ಪನ್ನೀರ್ ಸೇಲ್ವಂ ಸೇರಿದಂತೆ ಅವರ ಸಂಪುಟದ 19 ಸಚಿವರು ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರ ಪೊಯಸ್ ಗಾರ್ಡನ್ ನಿವಾಸಕ್ಕೆ ಭೇಟಿ ನೀಡಿದ್ದು, ಸಿಎಂ ಸ್ಥಾನ ಪನ್ನೀರ್ ಸೇಲ್ವಂ ಇಂದೇ ರಾಜಿನಾಮೆ ನೀಡುವ ಸಾಧ್ಯತೆ ಇದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಜಯಲಲಿತಾ ಅವರು, ಪನ್ನೀರ್ ಸೇಲ್ವಂ ರಾಜಿನಾಮೆ ಬಳಿಕ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪಿನಿಂದಾಗಿ ಜಯಲಲಿತಾ ಅವರ ಶಾಸಕತ್ವ ರದ್ದಾಗಿದ್ದು, ಮುಂದಿನ ಆರು ತಿಂಗಳಲ್ಲಿ ಉಪ ಚುನಾವಣೆ ಮೂಲಕ ಮತ್ತೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ.

ಈ ಮಧ್ಯೆ, ಜಯಲಲಿತಾ ಅವರು ತಾವು ಒಬ್ಬರೇ ಉಪ ಚುನಾವಣೆಗೆ ಹೋಗಿ, ಒಂದೇ ವರ್ಷದಲ್ಲಿ ಎರಡು ಬಾರಿ ಚುನಾವಣೆ ಎದುರಿಸುವ ಬದಲು ಅವಧಿಗೆ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿ, ಹೊಸ ಜನಾದೇಶ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡು ವಿಧಾನಸಭೆ ಅವಧಿ 2016ರ ಮೇನಲ್ಲಿ ಅಂತ್ಯಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT