ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಧಾರ್ಮಿಕ ಹಾಗೂ ಮತ್ತಿತರ ಕಾರ್ಯಕ್ರಮಗಳಲ್ಲಿ ಆನೆಗಳನ್ನು ಹಿಂಸಿಸಬೇಡಿ: ಸುಪ್ರೀಮ್ ಕೋರ್ಟ್

ಹಬ್ಬಗಳಲ್ಲಿ ಹಾಗು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆನೆಗಳನ್ನು ಬಳಸುವಾಗ ಅವುಗಳಿಗೆ ಹಿಂಸೆಯಾಗದಂತೆ ನೋಡಿಕೊಳ್ಳಬೇಕು ಎಂದು ಆನೆಗಳ ಮಾಲೀಕರಿಗೆ ಸುಪ್ರೀಂ

ನವದೆಹಲಿ: ಹಬ್ಬಗಳಲ್ಲಿ ಹಾಗು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆನೆಗಳನ್ನು ಬಳಸುವಾಗ ಅವುಗಳಿಗೆ ಹಿಂಸೆಯಾಗದಂತೆ ನೋಡಿಕೊಳ್ಳಬೇಕು ಎಂದು ಆನೆಗಳ ಮಾಲೀಕರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದ್ದನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆಗೆ ಗುರಿಯಾಗುತ್ತೀರಿ ಎಂದು ಎಚ್ಚರಿಸೆ ಕೂಡ.

"ಮಧ್ಯಂತರ ಕ್ರಮವಾಗಿ ಎಲ್ಲ ಆಯೋಜಕರು, ಆನೆಗಳ ಮಾಲೀಕರು ಮತ್ತು ಹಬ್ಬಗಳ ಸಮನ್ವಯ ಸಮಿತಿಗಳಿಗೆ ಸೂಚಿಸುವುದೇನೆಂದರೆ, ಹಬ್ಬಗಳಲ್ಲಿ ಧಾರ್ಮಿಕ ಆಚರಣೆಗಳಲ್ಲಿ ಪ್ರದರ್ಶನ ನಿಡುವ ಆನೆಗಳನ್ನು ಹಿಂಸೆಗೆ ಗುರಿಪಡಿಸಬಾರದು" ಎಂದು ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ಪ್ರಫುಲ್ ಸಿ ಪಂಥ್ ಒಳಗೊಂಡ ವಿಭಾಗೀಯ ಪೀಠ ಹೇಳಿದೆ.

"ಇಂತಹ ಹಬ್ಬದ ಸಮಾರಂಭಗಳಲ್ಲಿ ಆನೆಗಳನ್ನು ಹಿಂಸೆಗೆ ಗುರಿಪಡಿಸಲಾಗುತ್ತಿದೆ ಎಂದು ನ್ಯಾಯಾಲಯದಲ್ಲಿ ಸಾಬೀತುಪಡಿಸಲಾಗಿದೆ. ಇಂತಹ ಆಯೋಜಕರು, ಸಮಿತಿ ಸದಸ್ಯರು ಹಾಗೂ ಭಾಗಿಯಾದ ಇತರರನ್ನು ನ್ಯಾಯಂಗ ನಿಂದನೆ ಆರೋಪದಡಿ ವಿಚಾರಣೆಗೆ ಒಳಪಡಿಸಲಾಗುತ್ತದೆ" ಎಂದಿರುವ ಕೋರ್ಟ್ ಜುಲೈ ೧೪ ಕ್ಕೆ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಕೇರಳದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆನೆಗಳು ಪ್ರದರ್ಶನ ನೀಡಂದತೆ ತಡೆಹಾಕಲು ಗೌರಿ ಮೌಲೇಕೇಶಿ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಮಧ್ಯಂತರ ಆದೇಶ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT