ಅರುಣಾ ಶಾನಭಾಗ್ 
ಪ್ರಧಾನ ಸುದ್ದಿ

ಅತ್ಯಾಚಾರ ಸಂತ್ರಸ್ತೆ ನರ್ಸ್ ಅರುಣಾ ಶಾನಭಾಗ್ ನಿಧನ

ಕಳೆದ 42 ವರ್ಷಗಳಿಂದ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿದ್ದ ಅರುಣಾ ರಾಮಚಂದ್ರ ಶಾನಭಾಗ್ ಅವರ ಸೋಮವಾರ ನಿಧನರಾಗಿದ್ದಾರೆ.

ಮುಂಬೈ: ಕಳೆದ 42 ವರ್ಷಗಳಿಂದ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿದ್ದ ಅರುಣಾ ರಾಮಚಂದ್ರ ಶಾನಭಾಗ್ ಅವರ ಸೋಮವಾರ ನಿಧನರಾಗಿದ್ದಾರೆ.

ಅತ್ಯಾಚಾರಕ್ಕೊಳಗಾಗಿ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಕೋಣೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರುಣಾ ಶಾನಭಾಗ(68) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಕಳೆದ ಅವರನ್ನು ತೀವ್ರ ನಿಗಾ ಘಟಕಾದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

ಮುಂಬೈನಲ್ಲಿ ನರ್ಸ್ ಆಗಿದ್ದ ಅರುಣಾ ಶಾನಭಾಗ್ ಅವರನ್ನು ಅದೇ ಆಸ್ಪತ್ರೆಯ ವಾರ್ಡ್ ಬಾಯ್ ಆಗಿದ್ದ ಸೋಹನ್ ಲಾಲ್ ಭಟ್ರಾ ವಾಲ್ಮಿಕಿ ಎಂಬಾತ ಆಕೆಯನ್ನು 1973ರಲ್ಲಿ ಭೀಕರವಾಗಿ ಅತ್ಯಾಚಾರ ಎಸಗಿದ್ದ. ಘಟನೆಯ ಬಳಿಕ ಅರುಣಾ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಸತತ 42 ವರ್ಷಗಳಿಂದ ಜೀವಚ್ಛವವಾಗಿ ಹಾಸಿಗೆಯಲ್ಲಿ ಮಲಗಿದ್ದರು. ಈ ದುಷ್ಕೃತ್ಯಕ್ಕೆ ಕಾರಣನಾದ ವಾಲ್ಮಿಕಿಯನ್ನು ಅದೇ ಆಸ್ಪತ್ರೆಯಲ್ಲಿ ನಾಯಿ ಚೈನಿನಿಂದ ನಿಯಂತ್ರಿಸಲಾಗಿದೆ.

ಜೀವಚ್ಛವವಾಗಿ ಮಲಗಿದ್ದ ಅರುಣಾ ಶಾನಭಾಗ್ ಅವರಿಗೆ ದಯಾಮರಣ ಕರುಣಿಸಬೇಕು ಎಂದು ಪತ್ರಕರ್ತೆ ಪಿಂಕಿ ವಿನಾನಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ 2011ರಲ್ಲಿ ಸುಪ್ರೀಂಕೋರ್ಟ್ ದಯಾಮರಣ ಅರ್ಜಿಯನ್ನು ತಿರಸ್ಕರಿಸಿತ್ತು. ಅರುಣಾರಿಗೆ ದಯಾಮರಣ ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!