ಅರುಣಾ ಶಾನಭಾಗ್ 
ಪ್ರಧಾನ ಸುದ್ದಿ

ಅತ್ಯಾಚಾರ ಸಂತ್ರಸ್ತೆ ನರ್ಸ್ ಅರುಣಾ ಶಾನಭಾಗ್ ನಿಧನ

ಕಳೆದ 42 ವರ್ಷಗಳಿಂದ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿದ್ದ ಅರುಣಾ ರಾಮಚಂದ್ರ ಶಾನಭಾಗ್ ಅವರ ಸೋಮವಾರ ನಿಧನರಾಗಿದ್ದಾರೆ.

ಮುಂಬೈ: ಕಳೆದ 42 ವರ್ಷಗಳಿಂದ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿದ್ದ ಅರುಣಾ ರಾಮಚಂದ್ರ ಶಾನಭಾಗ್ ಅವರ ಸೋಮವಾರ ನಿಧನರಾಗಿದ್ದಾರೆ.

ಅತ್ಯಾಚಾರಕ್ಕೊಳಗಾಗಿ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಕೋಣೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರುಣಾ ಶಾನಭಾಗ(68) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಕಳೆದ ಅವರನ್ನು ತೀವ್ರ ನಿಗಾ ಘಟಕಾದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

ಮುಂಬೈನಲ್ಲಿ ನರ್ಸ್ ಆಗಿದ್ದ ಅರುಣಾ ಶಾನಭಾಗ್ ಅವರನ್ನು ಅದೇ ಆಸ್ಪತ್ರೆಯ ವಾರ್ಡ್ ಬಾಯ್ ಆಗಿದ್ದ ಸೋಹನ್ ಲಾಲ್ ಭಟ್ರಾ ವಾಲ್ಮಿಕಿ ಎಂಬಾತ ಆಕೆಯನ್ನು 1973ರಲ್ಲಿ ಭೀಕರವಾಗಿ ಅತ್ಯಾಚಾರ ಎಸಗಿದ್ದ. ಘಟನೆಯ ಬಳಿಕ ಅರುಣಾ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಸತತ 42 ವರ್ಷಗಳಿಂದ ಜೀವಚ್ಛವವಾಗಿ ಹಾಸಿಗೆಯಲ್ಲಿ ಮಲಗಿದ್ದರು. ಈ ದುಷ್ಕೃತ್ಯಕ್ಕೆ ಕಾರಣನಾದ ವಾಲ್ಮಿಕಿಯನ್ನು ಅದೇ ಆಸ್ಪತ್ರೆಯಲ್ಲಿ ನಾಯಿ ಚೈನಿನಿಂದ ನಿಯಂತ್ರಿಸಲಾಗಿದೆ.

ಜೀವಚ್ಛವವಾಗಿ ಮಲಗಿದ್ದ ಅರುಣಾ ಶಾನಭಾಗ್ ಅವರಿಗೆ ದಯಾಮರಣ ಕರುಣಿಸಬೇಕು ಎಂದು ಪತ್ರಕರ್ತೆ ಪಿಂಕಿ ವಿನಾನಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ 2011ರಲ್ಲಿ ಸುಪ್ರೀಂಕೋರ್ಟ್ ದಯಾಮರಣ ಅರ್ಜಿಯನ್ನು ತಿರಸ್ಕರಿಸಿತ್ತು. ಅರುಣಾರಿಗೆ ದಯಾಮರಣ ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT