ಸುಬ್ರಮಣಿಯನ್ ಸ್ವಾಮಿ 
ಪ್ರಧಾನ ಸುದ್ದಿ

ಅರವಿಂದ್ ಕೇಜ್ರಿವಾಲ್ ಓರ್ವ ನಕ್ಸಲೈಟ್: ಸುಬ್ರಮಣಿಯನ್ ಸ್ವಾಮಿ

ಮುಖ್ಯಕಾರ್ಯದರ್ಶಿ ನೇಮಕದಲ್ಲಿ ಅನಾವಶ್ಯಕವಾಗಿ ವಿವಾದ ಉಂಟುಮಾಡುತ್ತಿರುವ ಅರವಿಂದ್ ಕೇಜ್ರಿವಾಲ್ ಓರ್ವ ನಕ್ಸಲೈಟ್

ನವದೆಹಲಿ: ಶಕುಂತಲಾ ಗ್ಯಾಮ್ಲಿನ್ ಅವರನ್ನು ದೆಹಲಿ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವ ವಿಚಾರದಲ್ಲಿ ತಗಾದೆ ತೆಗೆದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಕಾರ್ಯದರ್ಶಿ ನೇಮಕದಲ್ಲಿ ಅನಾವಶ್ಯಕವಾಗಿ ವಿವಾದ ಉಂಟುಮಾಡುತ್ತಿರುವ ಅರವಿಂದ್ ಕೇಜ್ರಿವಾಲ್ ಓರ್ವ ನಕ್ಸಲೈಟ್ ಎಂದಿದ್ದು,  ಚುನಾವಣೆಗೂ ಮುನ್ನ ದೆಹಲಿ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಕೇಜ್ರಿವಾಲ್ ಗೆ ಆಸಕ್ತಿ ಇಲ್ಲ ಎಂದು ಅವರು ಆರೋಪಿಸಿದ್ದಾರೆ. 

ಭರವಸೆ ಈಡೇರಿಸಲು ಸಾಧ್ಯವಾಗದ ಕಾರಣ ಕೇಜ್ರಿವಾಲ್ ಅನವಶ್ಯಕ ವಿವಾದಗಳನ್ನು ಸೃಷ್ಟಿಸಿ, ಜನತೆಯ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ. ಕೇಜ್ರಿವಾಲ್ ಮೂತಃ ಓರ್ವ ನಕ್ಸಲೈಟಾಗಿದ್ದು ಅವರಿಗೆ ಆಡಳಿತ ನಡೆಸುವುದರಲ್ಲಿ ಆಸಕ್ತಿ ಇಲ್ಲವೆಂದು ಸುಬ್ರಮಣಿಯನ್ ಸ್ವಾಮಿ ಲೇವಡಿ ಮಾಡಿದ್ದಾರೆ.

ಉಚಿತ ವೈಫೈ ನೀಡುವ ಸಣ್ಣ ಭರವಸೆಯನ್ನೂ ಕೇರ್ಜಿವಾಲ್ ರಿಂದ ಈಡೇರಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕೇಳಿಬರುವ ಆರೋಪಗಳಿಂದ ಕಳಚಿಕೊಳ್ಳಲು ಕೇಜ್ರಿವಾಲ್ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಪತ್ರಕರ್ತರಿಗೆ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಫೆಬ್ರವರಿಯಲ್ಲಿ ಕೇಜ್ರಿವಾಲ್ ಅವರನ್ನು ನಕ್ಸಲೈಟ್ ಎಂದು ಬ್ರಾಂಡ್ ಮಾಡಿದ್ದ  ಸುಬ್ರಮಣಿಯನ್ ಸ್ವಾಮಿ,  ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೂ ಅರವಿಂದ್ ಕೇಜ್ರಿವಾಲ್ ಒಂದು ವರ್ಷಕ್ಕಿಂತ ಹೆಚ್ಚು ಆಡಳಿತ ನಡೆಸುವುದಿಲ್ಲ ಎಂದು ಭವಿಷ್ಯ ನುಡಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT