ಜನತಾ ದರ್ಶನದಲ್ಲಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜನತಾ ದರ್ಶನದ ವೇಳೆ ಕಲಾವಿದನಿಗೆ 10 ಸಾವಿರ ನಗದು ನೀಡಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಹಾಯ ಕೇಳಿ ಜನತಾ ದರ್ಶನಕ್ಕೆ ಆಗಮಿಸಿದ್ದ ರಂಗಭೂಮಿ ಕಲಾವಿದರೊಬ್ಬರಿಗೆ....

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಹಾಯ ಕೇಳಿ ಜನತಾ ದರ್ಶನಕ್ಕೆ ಆಗಮಿಸಿದ್ದ ರಂಗಭೂಮಿ ಕಲಾವಿದರೊಬ್ಬರಿಗೆ 10 ಸಾವಿರ ರುಪಾಯಿ ನಗದು ನೀಡಿ ಅಚ್ಚರಿ ಮೂಡಿಸಿದರು.

ಇಂದು ಮೈಸೂರಿನ ಶಾರದಾ ದೇವಿ ನಗರದ ತಮ್ಮ ನಿವಾಸದಲ್ಲಿ ಸಿಎಂ ಜನತಾ ದರ್ಶನ ನಡೆಸಿದರು. ಈ ವೇಳೆ ಅನಾರೋಗ್ಯದಿಂದ ಬಳಲುತ್ತಿದ್ದ, ಕಳೆದ 30 ವರ್ಷಗಳಿಂದ ತಮಗೆ ಪರಿಚಿತನಾಗಿದ್ದ ಕಲಾವಿದ ಮರಿಯಪ್ಪ ಅವರು ಚಿಕಿತ್ಸೆಗೆ ಸಹಾಯ ಕೋರಿ ಸಿಎಂ ಬಳಿ ಬಂದಿದ್ದರು.

ಸಾಮಾನ್ಯವಾಗಿ ಜನರ ಮನವಿ ಸ್ವೀಕರಿಸಿ, ಅದನ್ನು ತಮ್ಮ ಸಹಾಯಕರ ಕೈಗೆ ನೀಡುತ್ತಿದ್ದ ಸಿಎ, ಇಂದು ಸ್ಥಳದಲ್ಲೇ ತಮ್ಮ ಪರ್ಸ್‌ನಿಂದ 10 ಸಾವಿರ ರುಪಾಯಿ ತೆಗೆದು ಮರಿಯಪ್ಪ ಅವರಿಗೆ ನೀಡಿ ಗಮನ ಸೆಳೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT