ಡಿವಿ ಸದಾನಂದಗೌಡ 
ಪ್ರಧಾನ ಸುದ್ದಿ

ಒಂದಂಕಿ ಲಾಟರಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬಿಜೆಪಿ ಆಗ್ರಹ

ಒಂದಂಕಿ ಲಾಟರಿ ಹಗರಣವನ್ನು ಸಿಬಿಐಗೆ ಒಪ್ಪಿಸಿವಂತೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಮತ್ತು ಅನಂತ್‌ ಕುಮಾರ್‌ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ...

ಬೆಂಗಳೂರು: ಒಂದಂಕಿ ಲಾಟರಿ ಹಗರಣವನ್ನು ಸಿಬಿಐಗೆ ಒಪ್ಪಿಸಿವಂತೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸದಾನಂದಗೌಡ ಅವರು, ಹಗರಣದ ಹಿಂದೆ ರಾಜಕಾರಣಿಗಳ ಕೈವಾಡವಿದ್ದು, ಇಂತಹ ಹೈಫ್ರೋಫೈಲ್ ಹಗರಣವನ್ನು ಸಿಐಡಿ ಮೂಲಕ ತನಿಖೆ ನಡೆಸುವ ಬದಲು ಸಿಬಿಐಗೆ ಒಪ್ಪಿಸಿ ವಿಸ್ಕೃತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಹಗರಣಕ್ಕೆ ಸಂಬಂಧಿಸಿ ಆರೋಪ ಕೇಳಿ ಬಂದಿರುವ ನಮ್ಮ ಪಕ್ಷದಲ್ಲಿರುವ ಶಂಕರ್‌ ಬಿದರಿ ಸೇರಿದಂತೆ ಯಾರನ್ನೂ ರಕ್ಷಿಸುವ ಕೆಲಸ ನಾವು ಮಾಡುವುದಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ಹಗರಣದಲ್ಲಿ ಯಾರೆ ಶಾಮೀಲಾಗಿರಲಿ ಅವರ ವಿರುದ್ದ ನಿರ್ಧಾಕ್ಷಿಣ ಕ್ರಮ ಕೈಗೊಳ್ಳಬೇಕು ಎಂದರು.

ಅಕ್ರಮ ಲಾಟರಿ ದಂಧೆಯ ರೂವಾರಿ ಪಾರಿ ರಾಜನ್‌ ಜತೆ ನಿಕಟ ಸಂಪರ್ಕ ಹೊಂದಿರುವುದು ಕಂಡು ಬಂದ ಕಾರಣ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್‌ ಕುಮಾರ್‌ ಮತ್ತು ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಎಸ್ಪಿ ಧರಣೇಶ್‌ ಅವರನ್ನು ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT