ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ತೆಲಂಗಾಣ ಅಣೆಕಟ್ಟಿನಲ್ಲಿ ಮುಳುಗಿದ ೬ ಯುವ ಬಾಲಕರು

ತೆಲಂಗಾಣದ ಕರೀಂನಗರ ಜಿಲ್ಲೆಯ ಅಣೆಕಟ್ಟಿನಲ್ಲಿ ಸೋಮವಾರ ಆರು ಯುವ ಬಾಲಕರು ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್: ತೆಲಂಗಾಣದ ಕರೀಂನಗರ ಜಿಲ್ಲೆಯ ಅಣೆಕಟ್ಟಿನಲ್ಲಿ ಸೋಮವಾರ ಆರು ಯುವ ಬಾಲಕರು ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನಾನಕ್ಕಾಗಿ ೮ ರಿಂದ ೧೩ ವರ್ಷದ ಒಳಗಿನ ಬಾಲಕರು ಕರೀಂನಗರ ಹೊರವಲಯದ ಪದಮನಗರ ಕೆಳ ಮನೈರ್ ಡ್ಯಾಮ್ ನಲ್ಲಿ ಇಳಿದಾಗ ಈ ಘಟನೆ ನಡೆದಿದೆ.

ಹತ್ತಿರದ ಮೈದಾನದಲ್ಲಿ ಕ್ರಿಕೆಟ್ ಆಡಿದ್ದ ಈ ಬಾಲಕರು ಸ್ನಾನಕ್ಕಾಗಿ ಅಣೆಕಟ್ಟಿಗೆ ಇಳಿದ ಪರಿಣಾಮ ಒಬ್ಬರ ನಂತರ ಇನ್ನೊಬ್ಬರು ಎಲ್ಲರೂ ಮುಳುಗಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕರು ಮನೆ ತಲುಪದಿದ್ದರಿಂದ ಅವರನ್ನು ಹುಡುಕುತ್ತಾ ಬಂದ ಪೋಷಕರು ಅಣೆಕಟ್ಟಿನ ದಡದಲ್ಲಿ ನೀರಿಗೆ ಇಳಿಯದ ಅವರ ಸ್ನೇಹಿತನೊಬ್ಬ ಅಘಾತಕ್ಕೊಳಗಾಗಿ ಕುಳಿತಿದ್ದನ್ನು ನೋಡಿದ್ದಾರೆ.

ನಂತರ ಪೋಷಕರು ಪೊಲೀಸರಿಗೆ ವಿಷಯ ತಿಳಿಸಿದ್ದು ಆರು ಸಂತ್ರಸ್ತ ಬಾಲಕರ ದೇಹಗಳನ್ನು ಪತ್ತೆ ಹಚ್ಚಿ ಅವರ ಕುಟುಂಬಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT