ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ 
ಪ್ರಧಾನ ಸುದ್ದಿ

ಮೈಸೂರು ಮಹಾರಾಜನ ಪಟ್ಟ ಅಲಂಕರಿಸಿದ ಯದುವೀರ

ದಿ.ಶ್ರೀಕಂಠದತ್ತ ಒಡೆಯರ್ ಹಾಗೂ ರಾಣಿ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗುರುವಾರ ಮೈಸೂರಿನ...

ಮೈಸೂರು: ದಿ.ಶ್ರೀಕಂಠದತ್ತ ಒಡೆಯರ್ ಹಾಗೂ ರಾಣಿ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗುರುವಾರ ಮೈಸೂರಿನ ಮಹಾರಾಜನಾಗಿ ಹಾಗೂ ಯದುವಂಶದ 27ನೇ ದೊರೆಯನ್ನಾಗಿ ಪಟ್ಟಾಭಿಷೇಕ ಮಾಡಲಾಯಿತು.

ಅಂಬಾವಿಲಾಸ ಅರಮನೆಯಲ್ಲಿ ಇಂದು ಬೆಳಗ್ಗೆ 9.30ರಿಂದ 10.15ರೊಳಗೆ ಸಲ್ಲುವ ಶುಭಲಗ್ನದಲ್ಲಿ ನೂತನ ರಾಜ ಯದುವೀರ್ ಗೆ ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಲಾಯಿತು.

ಯದುವಂಶದ ಸಂಪ್ರದಾಯದಂತೆ ಎಲ್ಲ ರೀತಿಯ ಪೂಜೆಗಳನ್ನು ನೆರವೇರಿಸಿದ ನಂತರ ಚಿನ್ನದ ಪಟ್ಟಿಯನ್ನು ಯದುವೀರ ಅವರಿಗೆ ಕಟ್ಟುವ ಮೂಲಕ ಪಟ್ಟಾಭಿಷೇಕ ಮಾಡಲಾಯಿತು. ಬಳಿಕ ಯದುವೀರ ಅವರಿಗೆ ನವಗ್ರಹ ಪೂಜೆ, ಪುರುಷಸೂಕ್ತ, ಶ್ರೀಸೂಕ್ತ ಇದ್ಯಾತಿ ಮಂತ್ರದಿಂದ ಪ್ರೋಕ್ಷಣೆ ಮಾಡಲಾಯಿತು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದ ಪ್ರಾತಾಪ ಸಿಂಹ, ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಹಲವು ಗಣ್ಣಯರು ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT