ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ 
ಪ್ರಧಾನ ಸುದ್ದಿ

ಮೋದಿ ಭೇಟಿ ಮಾಡಿದ ಮಾಂಝಿ, ಬಿಜೆಪಿ ಜೊತೆ ಕೈಜೋಡಿಸುವ ಸಾಧ್ಯತೆ

ಜನತಾ ಪರಿವಾರದ ವಿಲೀನದ ಬಗ್ಗೆ ಇನ್ನು ವಿವಾದಗಳು ಬಗೆ ಹರಿಯುವ ಲಕ್ಷಣಗಳು ಕಾಣದಾಗಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ

ನವದೆಹಲಿ: ಜನತಾ ಪರಿವಾರದ ವಿಲೀನದ ಬಗ್ಗೆ ಇನ್ನು ವಿವಾದಗಳು ಬಗೆ ಹರಿಯುವ ಲಕ್ಷಣಗಳು ಕಾಣದಾಗಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ಜಾತಿ ಆಧಾರಿತ ಬಿಹಾರ ರಾಜಕಾರಣದಲ್ಲಿ ಪ್ರಮುಖರಾಗಿ ಹೊರಹೊಮ್ಮಲು ಪ್ರಯತ್ನಿಸುತ್ತಿದ್ದಾರೆ.

ಆರ್ ಜೆ ಡಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ನವೆಂಬರ್ ನಲ್ಲಿ ನಡೆಯುವ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನು ಮಣಿಸಲು ತಮ್ಮ ಜೊತೆ ಕೈಜೋಡಿಸುವಂತೆ ಮನವಿ ಮಾಡಿದ ಕೆಲ ದಿನಗಳ ನಂತರ ಈಗ ಮಾಂಝಿ ತಮ್ಮ ಆಟಕ್ಕೆ ಮುಂದಾಗಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮಾಂಝಿ ರೈತರಿಂದ ಧಾನ್ಯ ಸಂಗ್ರಹ ಪ್ರಕರಣದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಸಿ ಬಿ ಐ ತನಿಖೆಗೆ ಆದೇಶಿಸಲು ಮನವಿ ಮಾಡಿದ್ದಾರೆ.

"ರಾಜ್ಯದಲ್ಲಿ ರೈತರನ್ನು ಕಡೆಗಣಿಸುತ್ತಿರುವ ವಿಷಯವನ್ನು ಪ್ರಧಾನಿಯವರ ಗಮನಕ್ಕೆ ತರಬೇಕಿತ್ತು. ಈ ಪ್ರಕರಣಗಳ ಮೇಲೆ ಸಿ ಬಿ ಐ ತನಿಖೆಗೆ ಆದೇಶಿಸಲು ಸಹಕರಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ" ಎಂದು ಭೇಟಿಯ ನಂತರ ಮಾಂಝಿ ತಿಳಿಸಿದ್ದಾರೆ.

ಜೆಡಿಯು ಮತ್ತು ಆರ್ ಜೆ ಡಿ ಜಂಟಿಯಾಗಿ ಚುನಾವಣೆಗೆ ಹೋಗುತ್ತಿರುವ ಹಿನ್ನಲೆಯಲ್ಲಿ, ಮಹಾದಲಿತ ಸಮುದಾಯವನ್ನು ಓಲೈಸಲು ಮಾಂಝಿ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎನ್ನುವ ಸುದ್ದಿ ಈಗ ದಟ್ಟವಾಗಿದೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT