ಐಐಟಿ ಮದ್ರಾಸ್ 
ಪ್ರಧಾನ ಸುದ್ದಿ

ಐಐಟಿ ಮದ್ರಾಸ್ ವಿವಾದ: ವಿಶ್ವವಿದ್ಯಾಲಯದ ಆವರಣದ ಹೊರಗೆ ವಿದ್ಯಾರ್ಥಿಗಳ ಪ್ರತಿಭಟನೆ

ಜಾತೀಯತೆಯ ಕಾರಣಗಳಿಗಾಗಿ ಐ ಐ ಟಿ ಮದ್ರಾಸ್ ಸಂಸ್ಥೆಯ ಅಂಬೇಡ್ಕರ್ ಪೆರಿಯಾರ್ ಅಧ್ಯಯನ ಸಂಘಟನೆಯ(ಎ ಪಿ ಎಸ್ ಸಿ) ಮಾನ್ಯತೆಯನ್ನು ರದ್ದುಪಡಿಸಿರುವ

ಚೆನ್ನೈ: ಜಾತೀಯತೆಯ ಕಾರಣಗಳಿಗಾಗಿ ಐ ಐ ಟಿ ಮದ್ರಾಸ್ ಸಂಸ್ಥೆಯ ಅಂಬೇಡ್ಕರ್ ಪೆರಿಯಾರ್ ಅಧ್ಯಯನ ಸಂಘಟನೆಯ(ಎ ಪಿ ಎಸ್ ಸಿ) ಮಾನ್ಯತೆಯನ್ನು ರದ್ದುಪಡಿಸಿರುವ ಹಿನ್ನಲೆಯಲ್ಲಿ ಬಲಪಂಥೀಯ ಗುಂಪುಗಳು ಹಾಗೂ ಎಡಪಂಥೀಯ ಗುಂಪುಗಳು ವಿಶ್ವವಿದ್ಯಾಲಯದ ಆವರಣದ ಹೊರಗೆ ಶನಿವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ನಿಯಂತ್ರಿಸಲು ಬೆಳಗ್ಗಿನಿಂದಲೆ ವಿಶ್ವವಿದ್ಯಾಲಯವನ್ನು ಪೊಲೀಸರು ದಟ್ಟವಾಗಿ ಸುತ್ತುವರೆದಿದ್ದ ದೃಶ್ಯ ಕಂಡು ಬಂತು.

ಕ್ರಾಂತಿಕಾರಿ ವಿದ್ಯಾರ್ಥಿ ಯುವ ಪಡೆಯ ಸದಸ್ಯರು ವಿಶ್ವವಿದ್ಯಾಲಯದ ಒಳಗೆ ಮನುಧರ್ಮ ತುಂಬಿತುಳುಕುತ್ತಿದೆ ಎಂದು ಬಿಲ್ಲೆಗಳನ್ನು ಹಂಚಿ ಪ್ರತಿಭಟನೆ ಮಾಡಿದರು.

ಸಿ ಪಿ ಎಂ ಯುವ ಘಟಕ, ಡಿ ವೈ ಎಫ್ ಐ ಸದಸ್ಯರು ಕೂಡ ಎ ಪಿ ಎಸ್ ಸಿ ಬೆಂಬಲಿಸಿ ಪ್ರತಿಭಟನೆ ನಡೆಸಿದವು. ಅಲ್ಲೇ ಹತ್ತಿರದ ಮಧ್ಯ ಕೈಲಾಶ್ ವೃತ್ತದ ಬಳಿ ದ್ರಾವಿಡ ಸಂಘಟನೆ ಪೆರಿಯಾರ್ ದ್ರಾವಿಡರ್ ಕಝಾಗಂ ಸದಸ್ಯರು ಕೂಡ ಐಐಟಿ ಆಡಳಿತ ಮಂಡಲಿಯ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆಗಳನ್ನೂ ಕೂಗಿದರು.

ಆಸಕ್ತಿದಾಯಕವಾಗಿ ಬಲಪಂಥೀಯ ಸಂಘಟನೆ 'ಹಿಂದು ಮಕ್ಕಳ ಕಟ್ಚಿ'ಯಾ ಅಧ್ಯಕ್ಷ ಅರ್ಜುನ್ ಸಂಪತ್ ಕೂಡ ಪ್ರತಿಭಟನೆ ನಡೆಸಿ ಸಂಸ್ಥೆಯನ್ನು ಅಂಬೇಡ್ಕರ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಿದರು.

ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಈ ಮಧ್ಯೆ ಬರಹಗಾರ್ತಿ, ಹೋರಾಟಗಾರ್ತಿ ಅರುಂಧತಿ ರಾಯ್ ಎ ಪಿ ಎಸ್ ಸಿ ಸಂಘಟನೆಗೆ ಇಮೇಲ್ ಮೂಲಕ ಬೆಂಬಲ ವ್ಯಕ್ತಪಡಿಸಿ ಹೋರಾಟ ಜಾರಿಯಲ್ಲಿಡುವಂತೆ ಕಿವಿಮಾತು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT