Mukhtar Abbas Naqvi 
ಪ್ರಧಾನ ಸುದ್ದಿ

ಅಲ್ಪಸಂಖ್ಯಾತರಲ್ಲಿ ಭಯದ ವಾತಾವರಣ ಸೃಷ್ಟಿಸಬೇಡಿ: ಜಾತ್ಯಾತೀತರಿಗೆ ನಖ್ವಿ ಕಿವಿಮಾತು

'ರಾಜಕೀಯ ಜಾತ್ಯಾತೀತವಾದಿಗಳು' ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಭಯಭೀತಿಯ ವಾತಾವರಣ ಸೃಷ್ಟಿಸುವುದರಿಂದ ದೂರ ಉಳಿಯಬೇಕು...

ನವದೆಹಲಿ: 'ರಾಜಕೀಯ ಜಾತ್ಯಾತೀತವಾದಿಗಳು' ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಭಯಭೀತಿಯ ವಾತಾವರಣ ಸೃಷ್ಟಿಸುವುದರಿಂದ ದೂರ ಉಳಿಯಬೇಕು ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.

"'ರಾಜಕೀಯ ಜಾತ್ಯಾತೀತವಾದಿಗಳು' ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಭಯಭೀತಿಯ ವಾತಾವರಣ ಸೃಷ್ಟಿಸುವುದರಿಂದ ಹಾಗು ತಮ್ಮ ರಾಜಕೀಯ ಹಿತಾಸಕ್ತಿಗೆ ಅವರನ್ನು ತಪ್ಪು ದಾರಿಗೆ ಎಳೆಯುವುದರಿಂದ ದೂರ ಉಳಿಯಬೇಕು" ಎಂದು ಕೇಂದ್ರ ವಕ್ಫ್ ಭವನದ ಉದ್ಘಾಟನಾ ಸಮಾರಂಭದ ವೇಳೆಯಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ದಶಕಗಳಿಂದ ಅಲ್ಪಸಂಖ್ಯಾತರ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಯಾವುದೇ ಪ್ರಾಮಾಣಿಕ ಪ್ರಯತ್ನಗಳು ನಡೆದಿಲ್ಲ ಎಂದು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ನಕ್ವಿ ಹೇಳಿದ್ದಾರೆ.

"ಈ ಸಮುದಾಯದವರನ್ನು ದುರುಪಯೋಗಪಡಿಸಿಕೊಳ್ಳಲು ಜಾತ್ಯಾತೀತರು ಎನಿಸಿಕೊಂಡವರು ಸ್ಪರ್ಧೆಗೆ ಬಿದ್ದಿದ್ದಾರೆ. ಇಂತಹ ನಡೆಯಿಂದ ಅಲ್ಪಸಂಖ್ಯಾತರ ಅಭಿವೃದ್ಧಿ ಅದರಲ್ಲೂ ಮುಸ್ಲಿಮರದ್ದು ಬರೀ ಕಾಗದದ ಮೇಲೆ ಉಳಿದಿದೆ" ಎಂದು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೇಶದ ಅಭಿವೃದ್ಧಿಯಲ್ಲಿ ಭಾಗವಹಿಸುವುದರ ಮೂಲಕ ಅಲ್ಪಸಂಖ್ಯಾತರಿಗೆ ಸಮಪಾಲು ನೀಡಲು ಮೋದಿ ಸರ್ಕಾರ ಶ್ರಮಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT