ಎಚ್ ಡಿ ಕುಮಾಸ್ವಾಮಿ 
ಪ್ರಧಾನ ಸುದ್ದಿ

ಪ್ರಶಸ್ತಿ ವಾಪಸ್ ಮಾಡುವುದು ಸರಿಯಲ್ಲ: ಕುಮಾರಸ್ವಾಮಿ

ದೇಶದಲ್ಲಿ ಅಸಹಿಷ್ಣುತೆಯನ್ನು ವಿರೋಧಿಸಿ ಪ್ರಶಸ್ತಿ ವಾಪಸ್ ನೀಡುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

ಮೈಸೂರು: ದೇಶದಲ್ಲಿ ಅಸಹಿಷ್ಣುತೆಯನ್ನು ವಿರೋಧಿಸಿ ಪ್ರಶಸ್ತಿ ವಾಪಸ್ ನೀಡುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ಮೈಸೂರಿನಲ್ಲಿ ಹಿರಿಯ ಸಾಹಿತಿ ದೇವನೂರು ಮಹದೇವ ಅವರು ಪ್ರಶಸ್ತಿ ತಮ್ಮ ಪ್ರಶಸ್ತಿಗಳನ್ನು ವಾಪಸ್ ಮಾಡುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ದೇವನೂರು ಮಹದೇವ ಅವರ ಬಗ್ಗೆ ವೈಯಕ್ತಿಕವಾಗಿ ನನಗೆ ಗೌರವ ಇದೆ. ಈ ಬಗ್ಗೆ ಪ್ರಶಸ್ತಿ ಸ್ವೀಕರಿಸುವ ಮುನ್ನ ದೇವನೂರು ಯೋಚಿಸಬೇಕಾಗಿತ್ತು. ಆದರೆ ಈಗ ಪ್ರಶಸ್ತಿ ವಾಪಸ್ ನೀಡುತ್ತಿರುವುದು ಸರಿಯಲ್ಲ. ಇದರಿಂದ ಯಾವದೇ ಪ್ರಯೋಜನೆ ಇಲ್ಲ ಎಂದಿದ್ದಾರೆ.

ಸಾಹಿತಿಗಳು ತಮ್ಮ ಪ್ರಶಸ್ತಿಗಳನ್ನು ವಾಪಸ್ ನೀಡುವ ಮುನ್ನ ಹಲವು ಬಾರಿ ಯೋಚಿಸಬೇಕು. ಸಾಹಿತಿಗಳು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಅವಲೋಕಿಸಿ ಪ್ರಶಸ್ತಿ ನೀಡಲಾಗುತ್ತದೆ. ಆದರೆ ಯಾವುದೋ ಒಂದು ನಿರ್ಧಿಷ್ಟ ಘಟನೆಯನ್ನು ವಿರೋಧಿಸಿ ತಮ್ಮ ಸೇವೆಗೆ ಸಂದ ಗೌರವವನ್ನು ವಾಪಸ್ ನೀಡಬಾರದು ಎಂದರು.

ಅಸಹಿಷ್ಣುತೆ ಬಗ್ಗೆ ಸಾಹಿತಿಗಳಲ್ಲೇ ಪರ, ವಿರೋಧದ ನಿಲುವು ಇದೆ. ಸಹಿಷ್ಣುತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಅಸಹಿಷ್ಣುತೆ ಬಗ್ಗೆ ಜನಜಾಗೃತಿ ಮೂಡಿಸಬೇಕು. ಅದನ್ನು ಬಿಟ್ಟು ಪ್ರಶಸ್ತಿ ವಾಪಸ್ ಕೊಟ್ಟರೆ ಏನು ಪ್ರಯೋಜನ ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ದೇವನೂರು ಮಹಾದೇವ ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಪದ್ಮಶ್ರೀ ಪ್ರಶಸ್ತಿ ವಾಪಸ್ ನೀಡಲು ನಿರ್ಧರಿಸಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT