ಮನೋಹರ್ ಪರಿಕರ್ 
ಪ್ರಧಾನ ಸುದ್ದಿ

ಪದಕ ಹಿಂದಿರುಗಿಸುವುದು ದೇಶಕ್ಕೆ ಮಾಡುವ ಅಪಮಾನ: ಪರಿಕ್ಕರ್

ದೇಶಕ್ಕಾಗಿ ಮಾಡಿದ ತ್ಯಾಗಕ್ಕಾಗಿ ಸೈನಿಕರಿಗೆ ನೀಡಲಾಗಿದ್ದ ಪದಕಗಳನ್ನು ಹಿಂದಿರುಗಿಸುವ ಮೂಲಕ ದೇಶಕ್ಕೆ...

ನವದೆಹಲಿ: ದೇಶಕ್ಕಾಗಿ ಮಾಡಿದ ತ್ಯಾಗಕ್ಕಾಗಿ ಸೈನಿಕರಿಗೆ ನೀಡಲಾಗಿದ್ದ ಪದಕಗಳನ್ನು ಹಿಂದಿರುಗಿಸುವ ಮೂಲಕ ದೇಶಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ವಿಷಾಧ ವ್ಯಕ್ತಪಡಿಸಿದ್ದಾರೆ. 
ಏಕೆ ಶ್ರೇಣಿ ಏಕ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ನಿವೃತ್ತ ಯೋಧರು ಪ್ರತಿಭಟನೆ ನಡೆಸುತ್ತಿದ್ದು, ತಮ್ಮ ಸೇವೆ ಮೆಚ್ಚಿ ಸರ್ಕಾರ ನೀಡಿದ್ದ ಪದಕಗಳನ್ನು ಹಿಂದಿರುಗುಸುತ್ತಿದ್ದು, ಕೆಲವರು ಪದಕಗಳನ್ನು ಸುಡುಲು ಪ್ರಯತ್ನಿಸುತ್ತಿದ್ದಾರೆ. 
ನಿವೃತ್ತ ಸೈನಿಕರ ಈ ಆವೇಶವನ್ನು ಖಂಡಿಸಿರುವ ಕೇಂದ್ರ ಸಚಿವ ಮನೋಹರ್ ಪರಿಕ್ಕರ್, ದೇಶಕ್ಕಾಗಿ ದುಡಿದ ಸೈನಿಕರಿಗೆ ಪದಕಗಳನ್ನು ನೀಡಿ ಗೌರವ ಸಲ್ಲಿಸಲಾಗಿದೆ. ಅದು ದೇಶದ ಹೆಮ್ಮೆಯಾಗಿದೆ. ಅಂತಹ ಪದಕಗಳನ್ನು ವಾಪಸ್ ಮಾಡುವುದು ದೇಶಕ್ಕೆ ಅಪಮಾನ ಮಾಡಿದಂತೆ ಎಂದು ಹೇಳಿದ್ದಾರೆ. 
ಇನ್ನು ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸುತ್ತಿಲ್ಲ ಎಂಬುದನ್ನು ನಿವೃತ್ತ ಸೈನಿಕರು ಸಾಬೀತುಪಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.  
ಆದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ನಿವೃತ್ತ ಸೈನಿಕರಿಗೆ ಬೆಂಬಲ ವ್ಯಕ್ತಪಡಿಸಿದ್ದು. ಕೇಂದ್ರ ಸರಕಾರ ಮನಸ್ಸಿಲ್ಲದ ಮನಸ್ಸಿನಲ್ಲಿ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT