ಬಸನಗೌಡ ಪಾಟೀಲ್ ಯತ್ನಾಳ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್‌ಗೆ 6 ತಿಂಗಳು ಜೈಲು ಶಿಕ್ಷೆ

ಮಾನನಷ್ಟ ಮೊಕದಮ್ಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹುಬ್ಬಳಿಯ 2ನೇ ಜೆಎಂಎಫ್‌ಸಿ ಕೋರ್ಟ್ ಆರು ತಿಂಗಳ...

ಹುಬ್ಬಳ್ಳಿ: ಮಾನನಷ್ಟ ಮೊಕದಮ್ಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹುಬ್ಬಳಿಯ 2ನೇ ಜೆಎಂಎಫ್‌ಸಿ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

2004ರ ಚುನಾವಣೆ ವೇಳೆ ಕನ್ನಡ ನಾಡು ಪಕ್ಷದ ಮುಖ್ಯಸ್ಥರಾಗಿದ್ದ ಮಾಜಿ ಸಂಸದ ವಿಜಯ್ ಸಂಕೇಶ್ವರ್ ಅವರ ವಿರುದ್ಧ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂಕೇಶ್ವರ್ ಅವರು ಯತ್ನಾಳ್ ವಿರುದ್ಧ ಮಾನನಷ್ಟ ಮೊಕದಮ್ಮೆ ಹೂಡಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಇಂದು ಯತ್ನಾಳ್ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ನೀಡಿದೆ. ಆದರೆ ಪ್ರಕರಣ ಸಂಬಂಧ ಯತ್ನಾಳ್ ಅವರು ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ.

'ಕನ್ನಡ ನಾಡು ಪಕ್ಷ ಕಟ್ಟಲು ನಾನು ದುಡ್ಡು ಕೊಟ್ಟಿದ್ದೇನೆ. ಆ ಪಕ್ಷಕ್ಕೆ ಶಿವಗಣಾರಾಧನೆ ಮಾಡಬೇಕು' ಎಂದು ಸುದ್ದಿಗೋಷ್ಠಿಯಲ್ಲಿ ಯತ್ನಾಳ್ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT