ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ 
ಪ್ರಧಾನ ಸುದ್ದಿ

ಲೋಕಾಯುಕ್ತರ ಪದಚ್ಯುತಿಗೆ ಬಿಜೆಪಿ, ಜೆಡಿಎಸ್ ನಿಂದ ಸಹಿ ಸಂಗ್ರಹ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರನ್ನು ಪದಚ್ಯುತಿಗೊಳಿಸುವಂತೆ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಮಂಗಳವಾರ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಹಿ ಸಂಗ್ರಹಿಸಿ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪನವರಿಗೆ ಮನವಿ ಸಲ್ಲಿಸಿದರು. ಮ

ಇನ್ನು ವಿಧಾನಪರಿಷತ್ ನಲ್ಲೂ ಬಿಜೆಪಿ, ಜೆಡಿಎಸ್ ಶಾಸಕರು ಸಹಿ ಸಂಗ್ರಹಿಸಿ ಸಭಾಪತಿ ಡಿಎಚ್ ಶಂಕರಮೂರ್ತಿಯವರಿಗೂ ಮನವಿ ಮಾಡಿವೆ.

ಲೋಕಾಯುಕ್ತ ನ್ಯಾ.ಭಾಸ್ಕರ ರಾವ್  ಪದಚ್ಯುತಿಗೆ ಸಂಬಂಧಿಸಿದಂತೆ ಬಿಜೆಪಿಯ ಎಲ್ಲಾ 46 ಹಾಗೂ ಜೆಡಿಎಸ್ ನ 37 ಶಾಸಕರು ಸಹಿ ಹಾಕಿ ಮನವಿ ಸಲ್ಲಿಸಿದ್ದಾರೆ ಎಂದು ಮನವಿ ಸ್ವೀಕರಿಸಿದ ನಂತರ ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಸದನದಲ್ಲಿ ಎಲ್ಲಾ ಶಾಸಕರ ಒಪ್ಪಿಗೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿಕೊಳ್ಳುವುದಾಗಿ ಸ್ಪೀಕರ್ ತಿಳಿಸಿದ್ದಾರೆ. ಅಲ್ಲದೆ ವರದಿ ಬಂದ ನಂತರ ಅದರ ಸಾಧಕ, ಬಾಧಕ ಅರಿತು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಲೋಕಾಯುಕ್ತರ ಪದಚ್ಯುತಿ ಪ್ರಕ್ರಿಯೆ ಚಾಲನೆಗೆ ಸದನದ ಮೂರನೇ ಒಂದರಷ್ಟು ಸದಸ್ಯರು ಸಹಿ ಮಾಡಿದ ಪತ್ರ ನೀಡಿದಲ್ಲಿ ಮಾತ್ರ ಅದು ಮಾನ್ಯಗೊಳ್ಳುತ್ತದೆ. ಆ ನಿಟ್ಟಿನಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಮನವಿ ಪತ್ರಕ್ಕೆ ಸಹಿ ಹಾಕಿ, ಸ್ಪೀಕರ್ ಗೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT