ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ರದ್ದು ಮಾಡಿ; ಸಭಾಪತಿಗೆ ಪತ್ರ

ನಟ ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತಿದ್ದು, ಇದನ್ನು ಕೂಡಲೇ ರದ್ದು ಮಾಡಬೇಕು...

ಬೆಂಗಳೂರು: ನಟ ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತಿದ್ದು, ಇದನ್ನು ಕೂಡಲೇ ರದ್ದು ಮಾಡಬೇಕು ಎಂದು ಸರ್ಕಾರಿ ಮುಖ್ಯ ಸಚೇತಕ ಆರ್.ವಿ.ವೆಂಕಟೇಶ್ ಅವರು ಬುಧವಾರ ವಿಧಾನಪರಿಷತ್ ಸಭಾಪತಿಗೆ ಪತ್ರ ಬರೆದಿದ್ದಾರೆ.

ಬಿಗ್ ಬಾಸ್ ಸೀಸನ್ ನ 3ರಲ್ಲಿ ಸ್ಪರ್ಧಿಯಾಗಿದ್ದ ಹುಚ್ಚ ವೆಂಕಟ್ ಮತ್ತೊಬ್ಬ ಸ್ಪರ್ಧಿ ರವಿ ಮೂರೂರ್ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಮಾಧ್ಯಮಗಳು ನಿರಂತರವಾಗಿ ಪ್ರಸಾರ ಮಾಡುತ್ತಿವೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಮತ್ತು ಬಿಗ್ ಬಾಸ್ ಶೋನಿಂದ ಸಮಾಜಕ್ಕೆ ಯಾವ ಪ್ರಯೋಜನವೂ ಇಲ್ಲ. ಹೀಗಾಗಿ ಈ ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ವೆಂಕಟೇಶ್ ಅವರು ಪತ್ರದ ಮೂಲಕ ಸಭಾಪತಿಯವರಿಗೆ ಮನವಿ ಮಾಡಿದ್ದಾರೆ. ಅಲ್ಲದೆ ರಿಯಾಲಿಟಿ ಶೋನಲ್ಲಿನ ಘಟನೆಗಳನ್ನೇ ಸುದ್ದಿ ವಾಹಿನಿಗಳು ದೊಡ್ಡದಾಗಿ ಬಿಂಬಿಸಿ ಪ್ರಸಾರ ಮಾಡುತ್ತಿವೆ ಎಂದು ಪತ್ರದಲ್ಲಿ ದೂರಿದ್ದಾರೆ.

ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ರಿಯಾಲಿಟಿ ಶೋಗಳನ್ನು ರದ್ದು ಮಾಡುವ ಮತ್ತು ನಿಯಂತ್ರಣ ಹೇರುವ ಕ್ರಮ ಕೈಗೊಳ್ಳಬೇಕು ಎಂದು ವೆಂಕಟೇಶ್ ಹೇಳಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಕಾರ್ಯಕ್ರಮದ ಅಂಗವಾಗಿ ವಾರಾಂತ್ಯದಲ್ಲಿ ನಡೆಯುವ 'ವಾರದ ಕಥೆ ಕಿಚ್ಚನ ಜೊತೆ' ಸಮಯದಲ್ಲಿ ಇದ್ದಕ್ಕಿದ್ದಂತೆ ರೊಚ್ಚಿಗೆದ್ದ ಹುಚ್ಚ ವೆಂಕಟ್ ಗಾಯಕ ರವಿ ಮೂರೂರ್ ಅವರ ಕಪಾಳಕ್ಕೆ ಬಾರಿಸಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಟಿವಿ ವಾಹಿನಿಗಳಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT