ಎಚ್.ಕೆ.ಪಾಟೀಲ್ 
ಪ್ರಧಾನ ಸುದ್ದಿ

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡನೆ, ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ

ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಕೆಳ ಹಂತದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ತರ ಪಂಚಾಯತ್ ರಾಜ್...

ಬೆಂಗಳೂರು: ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಕೆಳ ಹಂತದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ತರ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಅವರು ಇಂದು ವಿಧಾಸಭೆಯಲ್ಲಿ ಶಾಸಕ ರಮೇಶ್ ಕುಮಾರ್ ಅವರ ವರದಿಯನ್ನು ಆಧರಿಸಿ ಸಿದ್ಧಪಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡುವ ಮಹತ್ವದ ತಿದ್ದುಪಡಿ ಈ ವಿಧೇಯಕದಲ್ಲಿದೆ. ಈ ವಿಧೇಯಕ ಅಂಗೀಕಾರವಾದರೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು ರಾಜ್ಯ ಸಚಿವರ ಸ್ಥಾನಮಾನ, ಸಂಬಳ, ಇನ್ನಿತರ ಭತ್ಯೆಗಳನ್ನು ಪಡೆಯಲಿದ್ದಾರೆ.

ಪಂಚಾಯತ್ ವ್ಯವಸ್ಥೆಯಲ್ಲಿ ಪಾರದರ್ಶಕತೆಗೆ ಒತ್ತು ನೀಡಿ, ಎಲ್ಲಾ ಚುನಾಯಿತ ಸದಸ್ಯರ ಆಸ್ತಿ ಘೋಷಣೆಯನ್ನು ಕಡ್ಡಾಯಗೊಳಿಸುವ, ಗ್ರಾಮದ ಅಭಿವೃದ್ಧಿಯ ಸಂಪೂರ್ಣ ಜವಾಬ್ದಾರಿಯನ್ನು ಪಂಚಾಯ್ತಿಗೆ ನೀಡುವ ಹಾಗೂ ಪಂಚಾಯ್ತಿ ಸದಸ್ಯರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಈ ತಿದ್ದುಪಡಿ ವಿಧೇಯಕದ ಉದ್ದೇಶವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT