ಪ್ರಧಾನ ಸುದ್ದಿ

ಮರಳು ಮಾಫಿಯಾ ವಿರುದ್ಧ ಕಠಿಣ ಕ್ರಮ: ಪರಮೇಶ್ವರ

Srinivasamurthy VN

ಬೆಂಗಳೂರು: ರಾಜ್ಯದಲ್ಲಿ ಮರಳು ಮಾಫಿಯಾ ಬಹಳ ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಇದನ್ನು ಹತ್ತಿಕ್ಕುವ ಕೆಲಸವನ್ನು ತಮ್ಮ ಇಲಾಖೆ ನಿರ್ದಾಕ್ಷಿಣ್ಯವಾಗಿ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟವಾದ ಮಾತುಗಳಲ್ಲಿ ಹೇಳಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮರಳು ಮಾಫಿಯಾ ಬಲಿಷ್ಠವಾಗಿ ಬೆಳೆದಿದೆ. ಈ ಮಾಫಿಯಾಕ್ಕೆ ಯಾರ್ಯಾರ ಆಶ್ರಯವಿದೆ, ಯಾರ್ಯಾರು ಸಹಕಾರ ಕೊಡುತ್ತಿದ್ದಾರೆ  ಎಂಬುದನ್ನು ಇಲ್ಲಿ ಮಾತನಾಡಲು ಸಾಧ್ಯವಿಲ್ಲ. ಆದರೆ ಕಾನೂನು ಚೌಕಟ್ಟಿನಲ್ಲಿ ಯಾವ ರೀತಿಯ ನಿಯಂತ್ರಣ ಮಾಡಬೇಕೆಂದು ತಮಗೆ ಗೊತ್ತಿದೆ ಎಂದರು. ಕಾನೂನು ಬದ್ಧವಾಗಿ ಮರಳು ಸಾಗಣೆ, ಸಂಗ್ರಹಣೆ ಮಾಡಬೇಕಾಗುತ್ತದೆ. ಅದನ್ನು ಮೀರಿ ಅಕ್ರಮವಾಗಿ ನಡೆಸಿದರೆ ಅದನ್ನು ಖಂಡಿತವಾಗಿ ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದ ಅವರು, ಅಧಿಕಾರಿಗಳ ಮೇಲೆ ಹಲ್ಲೆ ಮಾಡುವ  ಘಟನೆ ರಾಜ್ಯದ ಅನೇಕ ಕಡೆ ನಡೆದಿದೆ. ಇದನ್ನೂ ಕೂಡ ಸರ್ಕಾರ ಸಹಿಸುವುದಿಲ್ಲ ಎಂದರು.

ರಿಯಾಲಿಟಿ ಶೋಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಇಲಾಖೆಯೊಡನೆ ಚರ್ಚಿಸಿ ತೀರ್ಮಾನಿಸಲಾಗುವುದು. ಕಾನೂನು ಮಿತಿ ದಾಟಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
-ಡಾ.ಜಿ.ಪರಮೇಶ್ವರ್ ಗೃಹ ಸಚಿವ

SCROLL FOR NEXT