ರಾಷ್ಟ್ರಕವಿ ಕುವೆಂಪು ಅವರ ನಿವಾಸ ಕವಿಶೈಲ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕವಿಶೈಲದಲ್ಲಿ ಕಳ್ಳರ ದಾಂಧಲೆ, ಕುವೆಂಪು ಅವರ ಪ್ರಶಸ್ತಿ ಕಳವು

ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯಲ್ಲಿರುವ ಮನೆಯ ಮೇಲೆ ಸೋಮವಾರ ರಾತ್ರಿ ಕಳ್ಳರು ದಾಳಿ ಮಾಡಿದ್ದು, ಅಮೂಲ್ಯವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ...

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯಲ್ಲಿರುವ ಮನೆಯ ಮೇಲೆ ಸೋಮವಾರ ರಾತ್ರಿ ಕಳ್ಳರು ದಾಳಿ ಮಾಡಿದ್ದು, ಅಮೂಲ್ಯವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿರುವ ಕುವೆಂಪು ಅವರ ನಿವಾಸ ಕವಿಶೈಲದ ಮೇಲೆ ಕಳೆದ ರಾತ್ರಿ ಕೆಲ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಕುವೆಂಪು  ಅವರ ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳು ಸೇರಿದಂತೆ ಹಲವು ಅಮೂಲ್ಯ ವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ. ಮನೆಗೆ ನುಗ್ಗುತ್ತಿದ್ದಂತೆಯೇ ಅಲ್ಲಿ  ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಕಳ್ಳರು, ಮನೆಯ ಶೋ ಕೇಸ್ ಗಾಜನ್ನು ಪುಡಿ-ಪುಡಿ ಮಾಡಿ ಅಲ್ಲಿದ್ದ ಅತ್ಯಮೂಲ್ಯ ವಸ್ತುಗಳನ್ನು ತೆಗೆದುಕೊಂಡು  ಪರಾರಿಯಾಗಿದ್ದಾರೆ.

ಪ್ರಸ್ತುತ ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ. ಪೊಲೀಸ್ ಪ್ರಾಥಮಿಕ ಮೂಲಗಳ ಪ್ರಕಾರ ಕವಿಶೈಲದಲ್ಲಿ ಸಿಬ್ಬಂದಿಗಳು ಕಡಿಮೆ ಇದ್ದ ಸಮಯನ್ನು  ಕಾದು ದುಷ್ಕರ್ಮಿಗಳು ಈ ಕೃತ್ಯವೆಸಗಿರಬಹುದು ಎಂದು ಹೇಳಲಾಗುತ್ತಿದೆ. ರಾಷ್ಟ್ರಕವಿ ಕುವೆಂಪು ಹುಟ್ಟೂರಾದ ತೀರ್ಥಹಳ್ಳಿ ಕವಿಶೈಲ ನಿವಾಸ ಪ್ರಸ್ತುತ ಪ್ರಮುಖ ಪ್ರವಾಸಿ ಸ್ಥಳವಾಗಿದ್ದು,  ಪ್ರತಿನಿತ್ಯ ನೂರಾರು ಜನರು ಕವಿಶೈಲಕ್ಕೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲೇ ಕಳ್ಳರ ದಾಳಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT