ಆರುಂಧತಿ ರಾಯ್ 
ಪ್ರಧಾನ ಸುದ್ದಿ

ಮೋದಿ ಸರ್ಕಾರ ಬ್ರಾಹ್ಮಣವಾದ ಪ್ರಚಾರ ಮಾಡುತ್ತಿದೆ: ಆರುಂಧತಿ ರಾಯ್

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹಿಂದೂ ರಾಷ್ಟ್ರ ನಿರ್ಮಾಣದ ಹೆಸರಲ್ಲಿ ಬ್ರಾಹ್ಮಣವಾದವನ್ನು ಪ್ರಚಾರ ಮಾಡುತ್ತಿದೆ ಎಂದು ಖ್ಯಾತ ಲೇಖಕಿ ಆರುಂಧತಿ...

ಪುಣೆ: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹಿಂದೂ ರಾಷ್ಟ್ರ ನಿರ್ಮಾಣದ ಹೆಸರಲ್ಲಿ ಬ್ರಾಹ್ಮಣವಾದವನ್ನು ಪ್ರಚಾರ ಮಾಡುತ್ತಿದೆ ಎಂದು ಖ್ಯಾತ ಲೇಖಕಿ ಆರುಂಧತಿ ರಾಯ್ ಆರೋಪಿಸಿದ್ದಾರೆ.

ಇಂದು ಪುಣೆಯಲ್ಲಿ ಸಾಮಾಜಿಕ ಹರಿಕಾರ ಮಹಾತ್ಮ ಜ್ಯೋತಿಬಾ ಫುಲೆ ಅವರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಯ್, ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸುವ ಮೂಲಕ ಅಸಹಿಷ್ಣುತೆ ಹೆಸರಲ್ಲಿ ಯಾರನ್ನ ಬೇಕಾದರೂ ದೇಶ ವಿರೋಧಿಗಳೆಂದು ಬಿಂಬಿಸಲು ಹೊರಟಿದ್ದಾರೆ ಎಂದರು.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ, ಸದ್ಯ ದೇಶದಲ್ಲಿ ನೆಲೆಸಿರುವ ಅಲ್ಪಸಂಖ್ಯಾತರು ಭಯದಲ್ಲಿ ಬದುಕುತ್ತಿದ್ದು, ಕೇಂದ್ರ ಸರ್ಕಾರ ಹಿಂದೂತ್ವದ ಹೆಸರಿನಲ್ಲಿ ಬ್ರಾಹ್ಮಣವಾದವನ್ನು ಪ್ರಚಾರ ಮಾಡುತ್ತಿದೆ ಎಂದು ದೂರಿದರು.

ಈ ವೇಳೆ ಸ್ಥಳದಲ್ಲಿದ್ದ ಬಿಜೆಪಿ ವಿದ್ಯಾರ್ಥಿ ಘಟಕ ಹಾಗೂ ಎಬಿವಿಪಿ ಕಾರ್ಯಕರ್ತರು ರಾಯ್ ಹೇಳಿಕೆಯನ್ನು ಖಂಡಿಸಿ ತೀವ್ರವಾಗಿ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT