ಉಮಾಶ್ರೀ 
ಪ್ರಧಾನ ಸುದ್ದಿ

ಆಸಿಡ್ ದಾಳಿಗೆ ಒಳಗಾದವರ ಚಿಕಿತ್ಸೆಗೆ ಸರ್ಕಾರದಿಂದ ರು.20 ಲಕ್ಷ ಪರಿಹಾರ

ಆಸಿಡ್ ದಾಳಿ ಹಾಗೂ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆಯಿಂದ ಗಾಯಗೊಂಡವರ ಚಿಕಿತ್ಸೆಗೆ 20 ಲಕ್ಷ ರುಪಾಯಿವರೆಗೆ...

ಬೆಂಗಳೂರು: ಆಸಿಡ್ ದಾಳಿ ಹಾಗೂ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆಯಿಂದ ಗಾಯಗೊಂಡವರ ಚಿಕಿತ್ಸೆಗೆ 20 ಲಕ್ಷ ರುಪಾಯಿವರೆಗೆ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರದ ಘೋಷಿಸಿದೆ.

ಈ ಸಂಬಂಧ ಐದು ದಿನಗಳ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಹೇಳಿದ್ದಾರೆ.

ಆಸಿಡ್ ದಾಳಿಗೆ ಒಳಗಾಗುವವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಬದ್ಧವಾಗಿದ್ದು, ಆಸಿಡ್ ಮತ್ತು ಸೀಮೆ ಎಣ್ಣೆ ದಾಳಿಯಲ್ಲಿ ಶೇ.50ರಷ್ಟು ಸುಟ್ಟ ಗಾಯಗಳಾಗಿದ್ದರೆ, ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಬಹುದು ಎಂದಿದ್ದಾರೆ. ಅಲ್ಲದೆ ತಿಂಗಳಿಗೆ 3 ಸಾವಿರ ರುಪಾಯಿ ಮಾಸಿಕ ಪಿಂಚಣಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಮುಂಚೆ ಆಸಿಡ್ ದಾಳಿಯಲ್ಲಿ ಗಾಯಗೊಂಡವರಿಗೆ ಸರ್ಕಾರ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಅದನ್ನು ಖಾಸಗಿ ಆಸ್ಪತ್ರೆಗೂ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT