ಉಮಾಶ್ರೀ 
ಪ್ರಧಾನ ಸುದ್ದಿ

ಆಸಿಡ್ ದಾಳಿಗೆ ಒಳಗಾದವರ ಚಿಕಿತ್ಸೆಗೆ ಸರ್ಕಾರದಿಂದ ರು.20 ಲಕ್ಷ ಪರಿಹಾರ

ಆಸಿಡ್ ದಾಳಿ ಹಾಗೂ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆಯಿಂದ ಗಾಯಗೊಂಡವರ ಚಿಕಿತ್ಸೆಗೆ 20 ಲಕ್ಷ ರುಪಾಯಿವರೆಗೆ...

ಬೆಂಗಳೂರು: ಆಸಿಡ್ ದಾಳಿ ಹಾಗೂ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆಯಿಂದ ಗಾಯಗೊಂಡವರ ಚಿಕಿತ್ಸೆಗೆ 20 ಲಕ್ಷ ರುಪಾಯಿವರೆಗೆ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರದ ಘೋಷಿಸಿದೆ.

ಈ ಸಂಬಂಧ ಐದು ದಿನಗಳ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಹೇಳಿದ್ದಾರೆ.

ಆಸಿಡ್ ದಾಳಿಗೆ ಒಳಗಾಗುವವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಬದ್ಧವಾಗಿದ್ದು, ಆಸಿಡ್ ಮತ್ತು ಸೀಮೆ ಎಣ್ಣೆ ದಾಳಿಯಲ್ಲಿ ಶೇ.50ರಷ್ಟು ಸುಟ್ಟ ಗಾಯಗಳಾಗಿದ್ದರೆ, ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಬಹುದು ಎಂದಿದ್ದಾರೆ. ಅಲ್ಲದೆ ತಿಂಗಳಿಗೆ 3 ಸಾವಿರ ರುಪಾಯಿ ಮಾಸಿಕ ಪಿಂಚಣಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಮುಂಚೆ ಆಸಿಡ್ ದಾಳಿಯಲ್ಲಿ ಗಾಯಗೊಂಡವರಿಗೆ ಸರ್ಕಾರ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಅದನ್ನು ಖಾಸಗಿ ಆಸ್ಪತ್ರೆಗೂ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!