ರಾಘವೇಶ್ವರ ಶ್ರೀ ಪ್ರಕರಣ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಶ್ರೀಗಳ ಜಾಮೀನು ರದ್ಧು ಮಾಡುವಂತೆ ಸಿಐಡಿ ಪಟ್ಟು

ಧಾರ್ಮಿಕ ನೆಪವೊಡ್ಡಿ ವೈದ್ಯಕೀಯ ಪರೀಕ್ಷೆಯಿಂದ ಜಾರಿಕೊಂಡಿದ್ದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಶ್ರೀಗಳಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ...

ಬೆಂಗಳೂರು: ಧಾರ್ಮಿಕ ನೆಪವೊಡ್ಡಿ ವೈದ್ಯಕೀಯ ಪರೀಕ್ಷೆಯಿಂದ ಜಾರಿಕೊಂಡಿದ್ದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಶ್ರೀಗಳಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಶ್ರೀಗಳು ನ್ಯಾಯಾಲಯದಿಂದ ಪಡೆದಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದು, ಸಿಐಡಿ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎ.ಬೆಳ್ಳಿಯಪ್ಪ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸಿಐಡಿ ಅಧಿಕಾರಿಗಳ ಸೂಚನೆಯಿದ್ದರೂ ರಾಘವೇಶ್ವರ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗಿಲ್ಲ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವೈದ್ಯಕೀಯ ಪರೀಕ್ಷೆಗೆ ಶ್ರೀಗಳು ಹಾಜರಾಗಿಲ್ಲ. ಈ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದ ಶ್ರೀಗಳು, ತಾವು ಈಗಾಗಲೇ ಡಿಎನ್‍ಎ ಪರೀಕ್ಷೆಗೆ ಹಾಜರಾಗಿದ್ದೇನೆ ಉಳಿದ ಮೂರು ಪರೀಕ್ಷೆಗಳು ಅಗತ್ಯವಿಲ್ಲ ಎಂದು ಪತ್ರ ಬರೆದಿರುವ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗಿಲ್ಲ. ಇದು ತಿನಿಖಾಧಿಕಾರಿಗಳ ಸೂಚನೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಹೀಗಾಗಿ ಅವರಿಗಿರುವ ನಿರೀಕ್ಷಣಾ ಜಾಮೀನನ್ನು ಕೂಡಲೇ ರದ್ದುಗೊಳಿಸುವಂತೆ ಕೋರಿ ಬಿ.ಎ.ಬೆಳ್ಳಿಯಪ್ಪ ಅವರು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಆರೋಪಪಟ್ಟಿ ಸಲ್ಲಿಸಿ ಶ್ರೀಗಳಿಗೆ ಸೆ.30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣ ಮತ್ತು ಯಕ್ಷಗಾನ ಕಲಾವಿದೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಶ್ರೀಗಳು ಜಾಮೀನು ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT