ನರೇಂದ್ರ ಮೋದಿ- ಏಂಜೆಲಾ ಮರ್ಕೆಲ್ 
ಪ್ರಧಾನ ಸುದ್ದಿ

ಬಾಷ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ-ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್

ಬೆಂಗಳೂರಿಗೆ ಭೇಟಿ ನೀಡಿರುವ ನರೇಂದ್ರ ಮೋದಿ- ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಬಾಷ್ ಕಂಪನಿಗೆ ಭೇಟಿ ನೀಡಿ ನ್ಯಾಸ್ಕಾಂ ಆಯೋಜಿಸಿದ್ದ ಭವಿಷ್ಯದ ಡಿಜಿಟಲೀಕರಣ ಶೃಂಗದಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರು: ಬೆಂಗಳೂರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ- ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಬಾಷ್ ಕಂಪನಿಗೆ ಭೇಟಿ ನೀಡಿ ನ್ಯಾಸ್ಕಾಂ ಆಯೋಜಿಸಿದ್ದ ಭವಿಷ್ಯದ ಡಿಜಿಟಲೀಕರಣ ಶೃಂಗದಲ್ಲಿ ಭಾಗವಹಿಸಿದ್ದಾರೆ.
ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉತ್ಪಾದನೆಗೆ ಹೆಚ್ಚಿನ ಮಹತ್ವ ನೀದಬೇಕಿದೆ, ಆದ್ದರಿಂದಲೇ ನಾವು ಮೆಕ್ ಇನ್ ಇಂಡಿಯಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಜಾಗತಿಕ ಆರ್ಥಿಕತೆ ಕುಂಠಿತವಾಗಿದ್ದರೂ ಭಾರತ ಬಂಡವಾಳ ಹೂಡಿಕೆಗೆ ಉಜ್ವಲ ತಾಣವಾಗಿದೆ. ಭಾರತವನ್ನು ಹೂಡಿಕೆ ಸ್ನೇಹಿ ಪ್ರದೇಶವನ್ನಾಗಿಸಲು ಕಳೆದ 15 ತಿಂಗಳಿನಿಂದ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.
ಭಾರತ- ಜರ್ಮನಿಯ ಆರ್ಥಿಕ ಸಂಬಂಧ ಅತಿ ಹೆಚ್ಚು ಸಾಮರ್ಥ್ಯ ಹೊಂದಿದ್ದು ವ್ಯಾಪಾರಕ್ಕೆ ಅನುಕೂಲಕರವಾಗುವಂತಹ ಪರಿಸ್ಥಿತಿಯನ್ನು ನಿರ್ಮಿಸಲು ಭಾರತ- ಜರ್ಮನಿ ಪ್ರಯತ್ನಿಸುತ್ತಿದೆ ಎಂದು ಮೋದಿ ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿದ ಜರ್ಮನಿ ಚಾನ್ಸೆಲರ್  ಏಂಜೆಲಾ ಮರ್ಕೆಲ್, ಜರ್ಮನಿ- ಭಾರತ ಸಂಬಂಧವನ್ನು ಮತ್ತಷ್ಟು ವೃದ್ಧಿಗೊಳಿಸಲು ಉಭಯ ದೇಶಗಳು ಉತ್ಸುಕವಾಗಿವೆ.  
ಭಾರತದ ಹೂಡಿಕೆದಾರರನ್ನು ಜರ್ಮನಿ ಸ್ವಾಗತಿಸುತ್ತದೆ. ಡಿಜಿಟಲೈಜೇಷನ್ ಕ್ಷೆತ್ರದಲ್ಲಿ ಭಾರತ-ಜರ್ಮನಿಗೆ ಉತ್ತಮ ಭವಿಷ್ಯವಿದೆ. ಮೋದಿ ಹಾಗೂ ತಮ್ಮ ಭೇಟಿ ಅಂಗವಾಗಿ ಬೆಂಗಳುರಿನಲ್ಲಿ ಜರ್ಮನಿ ಮೂಲದ 170 ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದು ಭಾರತ-ಜರ್ಮನಿ ದ್ವಿಪಕ್ಷೀಯ ಸಂಬಂಧವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ. 
ಜರ್ಮನಿಯ ಇಂಜಿನಿಯರಿಂಗ್, ಐಟಿ ಕ್ಷೇತ್ರದಲ್ಲಿ ಭಾರತದ ಬುದ್ಧಿವಂತಿಕೆ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ಏಂಜೆಲಾ ಮರ್ಕೆಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT