ನರೇಂದ್ರ ಮೋದಿ- ಏಂಜೆಲಾ ಮರ್ಕೆಲ್ 
ಪ್ರಧಾನ ಸುದ್ದಿ

ಬಾಷ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ-ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್

ಬೆಂಗಳೂರಿಗೆ ಭೇಟಿ ನೀಡಿರುವ ನರೇಂದ್ರ ಮೋದಿ- ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಬಾಷ್ ಕಂಪನಿಗೆ ಭೇಟಿ ನೀಡಿ ನ್ಯಾಸ್ಕಾಂ ಆಯೋಜಿಸಿದ್ದ ಭವಿಷ್ಯದ ಡಿಜಿಟಲೀಕರಣ ಶೃಂಗದಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರು: ಬೆಂಗಳೂರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ- ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಬಾಷ್ ಕಂಪನಿಗೆ ಭೇಟಿ ನೀಡಿ ನ್ಯಾಸ್ಕಾಂ ಆಯೋಜಿಸಿದ್ದ ಭವಿಷ್ಯದ ಡಿಜಿಟಲೀಕರಣ ಶೃಂಗದಲ್ಲಿ ಭಾಗವಹಿಸಿದ್ದಾರೆ.
ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉತ್ಪಾದನೆಗೆ ಹೆಚ್ಚಿನ ಮಹತ್ವ ನೀದಬೇಕಿದೆ, ಆದ್ದರಿಂದಲೇ ನಾವು ಮೆಕ್ ಇನ್ ಇಂಡಿಯಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಜಾಗತಿಕ ಆರ್ಥಿಕತೆ ಕುಂಠಿತವಾಗಿದ್ದರೂ ಭಾರತ ಬಂಡವಾಳ ಹೂಡಿಕೆಗೆ ಉಜ್ವಲ ತಾಣವಾಗಿದೆ. ಭಾರತವನ್ನು ಹೂಡಿಕೆ ಸ್ನೇಹಿ ಪ್ರದೇಶವನ್ನಾಗಿಸಲು ಕಳೆದ 15 ತಿಂಗಳಿನಿಂದ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.
ಭಾರತ- ಜರ್ಮನಿಯ ಆರ್ಥಿಕ ಸಂಬಂಧ ಅತಿ ಹೆಚ್ಚು ಸಾಮರ್ಥ್ಯ ಹೊಂದಿದ್ದು ವ್ಯಾಪಾರಕ್ಕೆ ಅನುಕೂಲಕರವಾಗುವಂತಹ ಪರಿಸ್ಥಿತಿಯನ್ನು ನಿರ್ಮಿಸಲು ಭಾರತ- ಜರ್ಮನಿ ಪ್ರಯತ್ನಿಸುತ್ತಿದೆ ಎಂದು ಮೋದಿ ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿದ ಜರ್ಮನಿ ಚಾನ್ಸೆಲರ್  ಏಂಜೆಲಾ ಮರ್ಕೆಲ್, ಜರ್ಮನಿ- ಭಾರತ ಸಂಬಂಧವನ್ನು ಮತ್ತಷ್ಟು ವೃದ್ಧಿಗೊಳಿಸಲು ಉಭಯ ದೇಶಗಳು ಉತ್ಸುಕವಾಗಿವೆ.  
ಭಾರತದ ಹೂಡಿಕೆದಾರರನ್ನು ಜರ್ಮನಿ ಸ್ವಾಗತಿಸುತ್ತದೆ. ಡಿಜಿಟಲೈಜೇಷನ್ ಕ್ಷೆತ್ರದಲ್ಲಿ ಭಾರತ-ಜರ್ಮನಿಗೆ ಉತ್ತಮ ಭವಿಷ್ಯವಿದೆ. ಮೋದಿ ಹಾಗೂ ತಮ್ಮ ಭೇಟಿ ಅಂಗವಾಗಿ ಬೆಂಗಳುರಿನಲ್ಲಿ ಜರ್ಮನಿ ಮೂಲದ 170 ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದು ಭಾರತ-ಜರ್ಮನಿ ದ್ವಿಪಕ್ಷೀಯ ಸಂಬಂಧವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ. 
ಜರ್ಮನಿಯ ಇಂಜಿನಿಯರಿಂಗ್, ಐಟಿ ಕ್ಷೇತ್ರದಲ್ಲಿ ಭಾರತದ ಬುದ್ಧಿವಂತಿಕೆ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ಏಂಜೆಲಾ ಮರ್ಕೆಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT