ಹಿರಿಯ ಬರಹಗಾರ್ತಿ, ಜವಾಹರ್ ಲಾಲ್ ನೆಹರು ಅವರ ಸೋದರ ಸೊಸೆ ನಯನತಾರ ಸೈಗಲ್ 
ಪ್ರಧಾನ ಸುದ್ದಿ

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸುತ್ತೇನೆ: ನೆಹರು ಸೋದರ ಸೊಸೆ ನಯನತಾರ ಸೈಗಲ್

ಕೇಂದ್ರ ಸರ್ಕಾರ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಲು ವಿಫಲವಾಗಿದೆ ಎಂದು ದೂರಿ ಹಿರಿಯ ಬರಹಗಾರ್ತಿ, ಜವಾಹರ್ ಲಾಲ್ ನೆಹರು ಅವರ ಸೋದರ ಸೊಸೆ ನಯನತಾರ ಸೈಗಲ್

ನವದೆಹಲಿ: ಕೇಂದ್ರ ಸರ್ಕಾರ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಲು ವಿಫಲವಾಗಿದೆ ಎಂದು ದೂರಿ ಹಿರಿಯ ಬರಹಗಾರ್ತಿ, ಜವಾಹರ್ ಲಾಲ್ ನೆಹರು ಅವರ ಸೋದರ ಸೊಸೆ ನಯನತಾರ ಸೈಗಲ್ ಅವರು ಪ್ರಖ್ಯಾತ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಲು ಮುಂದಾಗಿದ್ದಾರೆ.

೮೮ ವರ್ಷದ ಸೈಗಲ್ ಅವರು ೧೯೮೬ರಲ್ಲಿ ಈ ಪ್ರಶಸ್ತಿ ಪಡೆದಿದ್ದರು.

ಅವರು ತಮ್ಮ ಇತ್ತೀಚಿನ ಪುಸ್ತಕದಲ್ಲಿ, ಹಿಂದುತ್ವ ಸಿದ್ಧಾಂತವನ್ನು ವಿರೋಧಿಸಿದವರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡಲು ವಿಫಲವಾಗಿದೆ ಎಂದು ದೂರಿದ್ದರು ಹಾಗು ವಿರೋಧಿಸುವುದು ಭಾರತೀಯ ಸಂವಿಧಾನದ ಮೂಲ ಹಕ್ಕುಗಳಲ್ಲಿ ಒಂದು ಎಂದಿರುವ ಅವರು ಭಾರತದ ಸಾಂಸ್ಕೃತಿಕ ವೈವಿಧ್ಯತೆ ಆತಂಕದಲ್ಲಿದೆ ಎಂದಿದ್ದಾರೆ.

ಇತ್ತೀಚೆಗಷ್ಟೇ ಕನ್ನಡ ಸಂಶೋಧಕ ಎಂ ಎಂ ಕಲ್ಬುರ್ಗಿ ಅವರ ಹತ್ಯೆಯನ್ನು ವಿರೋಧಿಸಿ ಹಿಂದಿ ಲೇಖಕ ಉದಯ್ ಪ್ರಕಾಶ್ ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದನ್ನು ನೆನಪಿಸಿಕೊಳ್ಳಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT