ಕಾನೂನು ಸಚಿವ ಟಿ.ಬಿ.ಜಯಚಂದ್ರ 
ಪ್ರಧಾನ ಸುದ್ದಿ

ಬಿಜೆಪಿ ಸರ್ಕಾರದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗ ರದ್ದು

ಗೋ ಸಂರಕ್ಷಣೆಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ಕರ್ನಾಟಕ ಗೋಸೇವಾ ಆಯೋಗವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಬೆಂಗಳೂರು: ಗೋ ಸಂರಕ್ಷಣೆಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ಕರ್ನಾಟಕ ಗೋಸೇವಾ ಆಯೋಗವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಗೋಸೇವಾ ಆಯೋಗವನ್ನು ವಿಸರ್ಜಿಸಿ, ಅದನ್ನು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯೊಂದಿಗೆ ವಿಲೀನಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ಹಾಲು ಉತ್ಪಾದನೆ ಕಡಿಮೆ ಎಂಬ ಕಾರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನಾಟಿ ಹಸುಗಳು ಕಸಾಯಿಖಾನೆ ಪಾಲಾಗುತ್ತಿದ್ದವು. ಇದನ್ನು ತಡೆಯಲು ಮತ್ತು ಈ ಸಂಬಂಧ ಜಾಗೃತಿ ಮೂಡಿಸಲು ಬಿಜೆಪಿ ಸರ್ಕಾರ ಗೋಸೇವಾ ಆಯೋಗ ರಚಿಸಿತ್ತು.

ವಿಶೇಷ ಅಧಿವೇಶನ
ಬೆಂಗಳೂರಿನಲ್ಲಿ 10 ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲು ಸಂಪುಟ ಸಭೆ ತೀರ್ಮಾನಿಸಿದ್ದು, ಅಧವೇಶನದ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಲಿದ್ದಾರೆ ಎಂದು ಜಯಚಂದ್ರ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?