ಖ್ಯಾತ ಕವಿ-ಚಲನಚಿತ್ರ ಗೀತರಚನಕಾರ, ರಾಜ್ಯಸಭಾ ಸಂಸದ ಜಾವೇದ್ ಅಕ್ತರ್ 
ಪ್ರಧಾನ ಸುದ್ದಿ

ನಯನತಾರ ಸೈಗಲ್ ನೋವು ಅರ್ಥವಾಗುತ್ತದೆ: ರಾಜ್ಯಸಭಾ ಸಂಸದ ಜಾವೇದ್ ಅಕ್ತರ್

ಅಸಹನೆಯಿಂದ ಕೂಡಿದ ಇತ್ತೀಚಿನ ಘಟನೆಗಳು ಭಾರತದಲ್ಲಿ ನಡೆಯುತ್ತವೆ ಎಂಬ ನಿರೀಕ್ಷೆ ಇರಲಿಲ್ಲ ಎಂದು ಖ್ಯಾತ ಕವಿ-ಚಲನಚಿತ್ರ ಗೀತರಚನಕಾರ, ರಾಜ್ಯಸಭಾ ಸಂಸದ ಜಾವೇದ್ ಅಕ್ತರ್

ನವದೆಹಲಿ: ಅಸಹನೆಯಿಂದ ಕೂಡಿದ ಇತ್ತೀಚಿನ ಘಟನೆಗಳು ಭಾರತದಲ್ಲಿ ನಡೆಯುತ್ತವೆ ಎಂಬ ನಿರೀಕ್ಷೆ ಇರಲಿಲ್ಲ ಎಂದು ಖ್ಯಾತ ಕವಿ-ಚಲನಚಿತ್ರ ಗೀತರಚನಕಾರ, ರಾಜ್ಯಸಭಾ ಸಂಸದ ಜಾವೇದ್ ಅಕ್ತರ್ ಹೇಳಿದ್ದಾರೆ.

"ಕನಿಷ್ಠ ಇಂತಹ ಸಮಾಜವನ್ನು ಯಾರು ನಿರೀಕ್ಷಿಸುವುದಿಲ್ಲ. ಇಂತಹ ಘಟನೆಗಳು ಭಾರತದಲ್ಲಿ ಘಟಿಸುತ್ತವೆ ಎಂಬ ನಿರೀಕ್ಷೆ ಇರಲಿಲ್ಲ. ಬೇರೆ ಸಮಾಜಗಳಲ್ಲಿ ಅಂತಹ ಘಟನೆಗಳು ನಡೆಯುವುದನ್ನು ಕೇಳುತ್ತಿದ್ದೆವು, ಆದರೆ ನಮ್ಮಲ್ಲಲ್ಲ. ಇಲ್ಲಿ ನಡೆಯುತ್ತಿರುವುದರ ಬಗ್ಗೆ ಯಾರಿಗೂ ಹೆಮ್ಮೆ ಇಲ್ಲ" ಎಂದು ಅಕ್ತರ್ ತಿಳಿಸಿದ್ದಾರೆ.

ಆ ಅಸಹನೆಯನ್ನು ವಿರೋಧಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ ಬರಹಗಾರ್ತಿ, ದೇಶದ ಪ್ರಥಮ ಪ್ರಧಾನಿ ಜವಾಹಾರ್ ಲಾಲ್ ನೆಹರು ಅವರ ಸೋದರ ಸೊಸೆ ನಯನತಾರ ಸೈಗಲ್ ಅವರ ಬೆಂಬಲಕ್ಕೆ ಜಾವೇದ್ ಅಕ್ತರ್ ನಿಂತಿದ್ದಾರೆ.

"ಅವರ ದುಖಃವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಅವರು ಜಾತ್ಯಾತೀತತೆ ಮತ್ತು ಒಳ್ಳೆಯ ಮೌಲ್ಯಗಳುಳ್ಳ ಸಂಪ್ರದಾಯದಿಂದ ಬಂದವರು. ಅವರಿಗೆ ನೋವಾಗಿರಿವುದು ಸಹಜ" ಎಂದು ಅಕ್ತರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT