ವೈ ಎಸ್ ಆರ್ ಸಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ 
ಪ್ರಧಾನ ಸುದ್ದಿ

ಆಂಧ್ರ ವಿಶೇಷ ಸ್ಥಾನಮಾನಕ್ಕೆ ಉಪವಾಸ ಮುಂದುವರೆಸಿದ ಜಗನ್

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ವೈ ಎಸ್ ಆರ್ ಸಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿರುವ ಅನಿರ್ಧಿಷ್ಟ ಕಾಲದ ಉಪವಾಸ ಗುರುವಾರ

ವಿಜಯವಾಡ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ವೈ ಎಸ್ ಆರ್ ಸಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿರುವ ಅನಿರ್ಧಿಷ್ಟ ಕಾಲದ ಉಪವಾಸ ಗುರುವಾರ ಎರಡನೆ ದಿನಕ್ಕೆ ಕಾಲಿಟ್ಟಿದೆ.

ಹಲವಾರು ಸಂಘಟನೆಯ ಮುಖಂಡರು ಜಗನ್ ಆವರ ಜೊತೆ ಮಾತುಕತೆ ನಡೆಸಿದ್ದಾರೆ. ವೈ ಎಸ್ ಆರ್ ಕಾಂಗ್ರೆಸ್ ನ ಇತರ ಮುಖಂಡರೂ ಕೂಡ ಉಪವಾಸ ಧರಣಿಯಲ್ಲಿ ಭಾಗಿಯಾಗಿದ್ದಾರೆ.

ತಮ್ಮ ತಮ್ಮ ಜಿಲ್ಲೆಗಳಲ್ಲೇ ಉಪವಾಸ ಧರಣಿಗಳನ್ನು ಹಮ್ಮಿಕೊಳ್ಳುವಂತೆ ಪಕ್ಷದ ಜಿಲ್ಲ ಘಟಕಗಳಿಗೂ ತಿಳಿಸಲಾಗಿದೆ.

ಸರ್ಕಾರ ಮುಂದೆ ಬಂದು ವಿಶೇಷ ಸ್ಥಾನಮಾನವನ್ನು ಘೋಷಿಸುವವರೆಗೂ ಉಪವಾಸ ಮುಂದುವರೆಸುವುದಾಗಿ ಜಗನ್ ಹೇಳಿದ್ದಾರೆ. ಬಿಜೆಪಿ ನಾಯಕತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯದ ತೆಲುಗು ದೇಶಂ ಪಕ್ಷದ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ವಿಶೇಷ ಸ್ಥಾನಮಾನಕ್ಕೆ ತಡವಾಗುತ್ತಿರುವುದಕ್ಕೆ ಈ ಸರ್ಕಾರಗಳನ್ನು ದೂರಿದ್ದಾರೆ.

ಟಿಡಿಪಿ ಪಕ್ಷ ಕೇಂದ್ರ ಎನ್ ಡಿ ಎ ಸರ್ಕಾರದ ಭಾಗವಾಗಿದ್ದರೂ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಗಳಿಸಿಕೊಡುವುದರಲ್ಲಿ ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಮೇಲೆ ವಿರೋಧ ಪಕ್ಷದ ನಾಯಕರೂ ಆಗಿರುವ ಜಗನ್ ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್