ವೈ ಎಸ್ ಆರ್ ಸಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ 
ಪ್ರಧಾನ ಸುದ್ದಿ

ಆಂಧ್ರ ವಿಶೇಷ ಸ್ಥಾನಮಾನಕ್ಕೆ ಉಪವಾಸ ಮುಂದುವರೆಸಿದ ಜಗನ್

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ವೈ ಎಸ್ ಆರ್ ಸಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿರುವ ಅನಿರ್ಧಿಷ್ಟ ಕಾಲದ ಉಪವಾಸ ಗುರುವಾರ

ವಿಜಯವಾಡ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ವೈ ಎಸ್ ಆರ್ ಸಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿರುವ ಅನಿರ್ಧಿಷ್ಟ ಕಾಲದ ಉಪವಾಸ ಗುರುವಾರ ಎರಡನೆ ದಿನಕ್ಕೆ ಕಾಲಿಟ್ಟಿದೆ.

ಹಲವಾರು ಸಂಘಟನೆಯ ಮುಖಂಡರು ಜಗನ್ ಆವರ ಜೊತೆ ಮಾತುಕತೆ ನಡೆಸಿದ್ದಾರೆ. ವೈ ಎಸ್ ಆರ್ ಕಾಂಗ್ರೆಸ್ ನ ಇತರ ಮುಖಂಡರೂ ಕೂಡ ಉಪವಾಸ ಧರಣಿಯಲ್ಲಿ ಭಾಗಿಯಾಗಿದ್ದಾರೆ.

ತಮ್ಮ ತಮ್ಮ ಜಿಲ್ಲೆಗಳಲ್ಲೇ ಉಪವಾಸ ಧರಣಿಗಳನ್ನು ಹಮ್ಮಿಕೊಳ್ಳುವಂತೆ ಪಕ್ಷದ ಜಿಲ್ಲ ಘಟಕಗಳಿಗೂ ತಿಳಿಸಲಾಗಿದೆ.

ಸರ್ಕಾರ ಮುಂದೆ ಬಂದು ವಿಶೇಷ ಸ್ಥಾನಮಾನವನ್ನು ಘೋಷಿಸುವವರೆಗೂ ಉಪವಾಸ ಮುಂದುವರೆಸುವುದಾಗಿ ಜಗನ್ ಹೇಳಿದ್ದಾರೆ. ಬಿಜೆಪಿ ನಾಯಕತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯದ ತೆಲುಗು ದೇಶಂ ಪಕ್ಷದ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ವಿಶೇಷ ಸ್ಥಾನಮಾನಕ್ಕೆ ತಡವಾಗುತ್ತಿರುವುದಕ್ಕೆ ಈ ಸರ್ಕಾರಗಳನ್ನು ದೂರಿದ್ದಾರೆ.

ಟಿಡಿಪಿ ಪಕ್ಷ ಕೇಂದ್ರ ಎನ್ ಡಿ ಎ ಸರ್ಕಾರದ ಭಾಗವಾಗಿದ್ದರೂ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಗಳಿಸಿಕೊಡುವುದರಲ್ಲಿ ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಮೇಲೆ ವಿರೋಧ ಪಕ್ಷದ ನಾಯಕರೂ ಆಗಿರುವ ಜಗನ್ ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT