ರಶೀದ್ 
ಪ್ರಧಾನ ಸುದ್ದಿ

ಬೀಫ್ ಪಾರ್ಟಿ ಸಮರ್ಥಿಸಿಕೊಂಡ ಕಾಶ್ಮೀರ ಶಾಸಕ, ಬಿಜೆಪಿಯಿಂದ ಹತ್ಯೆಗೆ ಯತ್ನ ಆರೋಪ

ಬೀಫ್ ಪಾರ್ಟಿ ಆಯೋಜಿಸಿದ್ದಕ್ಕಾಗಿ ಬಿಜೆಪಿ ಶಾಸಕರಿಂದ ಹಲ್ಲೆಗೊಳಗಾಗಿರುವ ಕಾಶ್ಮೀರ ಪಕ್ಷೇತರ ಶಾಸಕ, ಎಂಜಿನಿಯರ್ ರಶೀದ್ ಅವರು...

ಶ್ರೀನಗರ: ಬೀಫ್ ಪಾರ್ಟಿ ಆಯೋಜಿಸಿದ್ದಕ್ಕಾಗಿ ಬಿಜೆಪಿ ಶಾಸಕರಿಂದ ಹಲ್ಲೆಗೊಳಗಾಗಿರುವ ಕಾಶ್ಮೀರ ಪಕ್ಷೇತರ ಶಾಸಕ, ಎಂಜಿನಿಯರ್ ರಶೀದ್ ಅವರು, ತಮ್ಮ ಬೀಫ್ ಪಾರ್ಟಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಕಾಶ್ಮೀರ ವಿಧಾನಸಭೆಯಲ್ಲಿ ಹಲ್ಲೆಗೊಳಗಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಶೀದ್, ನಾನು ಯಾವುದೇ ಕಾನೂನ ಬಾಹಿರ ಕೃತ್ಯ ಎಸಗಿಲ್ಲ. ನಾನು ಶಾಸಕರ ಭವನದ ಸೌಲಭ್ಯವನ್ನು ಬಳಸಿಕೊಳ್ಳುವುದಿಲ್ಲ. ಹೀಗಾಗಿ ಹೊರಗಡೆಯಿಂದ ಆಹಾರ(ಬೀಫ್) ತರಿಸಿದ್ದೇನೆ. ಇದರಿಂದ ಯಾರ ಭಾವನೆಗೂ ಧಕ್ಕೆಯುಂಟು ಮಾಡುವ ಉದ್ದೇಶ ಇಲ್ಲ ಎಂದಿದ್ದಾರೆ.

ಭಾರತೀಯ ಜನತಾ ಪಕ್ಷ(ಬಿಜೆಪಿ) ನನ್ನ ಕೊಲೆಗೆ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಶಾಸಕ, ಸುಮಾರು 6ರಿಂದ 8 ಶಾಸಕರು ನನ್ನ ಮೇಲೆ ಹಲ್ಲೆ ನಡೆಸಿದರು. ಪ್ರಜಾಪ್ರಭುತ್ವದ ವರ್ತನೆ ಇದೇನಾ ಎಂದು ಪ್ರಶ್ನಿಸಿದ್ದಾರೆ.

'ಶಾಸಕರ ಭವನದಲ್ಲಿ ನಿಮಗೆ ಹಲವು ಮದ್ಯದ ಬಾಟಲಿಗಳು ಸಿಗುತ್ತವೆ. ಶಾಸಕರು ಶಾಸಕರ ಭವನದಲ್ಲಿ ಮದ್ಯ ಸೇವನೆ ಮಾಡಬಹುದಾದರೆ, ಬೀಫ್ ಏಕೆ ತಿನ್ನಬಾರದು' ಎಂದು ರಶೀದ್ ಪ್ರಶ್ನಿಸಿದ್ದಾರೆ.

ಬೀಫ್ ಔತಣಕೂಟವನ್ನು ಆಯೋಜಿಸಿದ್ದಕ್ಕೆ ಜಮ್ಮು ಮತ್ತು ಕಾಶ್ಮೀರದ ಶಾಸಕ ರಶೀದ್ ಅವರಿಗೆ ವಿಧಾನಸಭೆಯಲ್ಲೇ ಬಿಜೆಪಿ ಶಾಸಕರು ಇಂದು ಥಳಿಸಿದ ಘಟನೆ ನಡೆದಿದೆ.

ಕಾಶ್ಮೀರದಲ್ಲಿ ಗೋಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದನ್ನು ಜಾರಿಗೊಳಿಸುವಂತೆ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಆದೇಶಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಎರಡು ತಿಂಗಳ ಕಾಲ ಹೈಕೋರ್ಟ್ ಆದೇಶವನ್ನು ಅಮಾನತುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT