ಬಾಲಕಿ ಮೇಲೆ ಅತ್ಯಾಚಾರ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ದೆಹಲಿಯಲ್ಲಿ 4 ವರ್ಷದ ಪುಟ್ಟ ಕಂದಮ್ಮನ ಮೇಲೆ ಸಾಮೂಹಿಕ ಅತ್ಯಾಚಾರ..!

ನಿರ್ಭಯಾ ಪ್ರಕರಣ ಬಳಿಕದ ರಾಜಧಾನಿ ದೆಹಲಿಯಲ್ಲಿ ಮತ್ತೆ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, 4 ವರ್ಷದ ಪುಟ್ಟ ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ...

ನವದೆಹಲಿ: ನಿರ್ಭಯಾ ಪ್ರಕರಣ ಬಳಿಕದ ರಾಜಧಾನಿ ದೆಹಲಿಯಲ್ಲಿ ಮತ್ತೆ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, 4 ವರ್ಷದ ಪುಟ್ಟ ಬಾಲಕಿ ಮೇಲೆ ಕಾಮುಕರು ಸಾಮೂಹಿಕ  ಅತ್ಯಾಚಾರ ನಡೆಸಿದ್ದಾರೆ.

ವಾಯುವ್ಯ ದೆಹಲಿ ಭಾಗದಲ್ಲಿರುವ ಕೇಶವ್ ಪುರಂ ಸ್ಲಮ್ ನಲ್ಲಿ ಈ ಘಟನೆ ಸಂಭವಿಸಿದ್ದು, ಪ್ರಸ್ತುತ ಬಾಲಕಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಕೇಶವಪುರನಲ್ಲಿ ತೀವ್ರ ರಕ್ತ  ಸ್ರಾವದಿಂದ ಬಿದ್ದಿದ್ದ ಮಗುವನ್ನು ಕಂಡ ದಾರಿಹೋಕರು ಕೂಡಲೇ ಆಕೆಯನ್ನು ದೆಹಲಿಯ ಮಹಾವೀರ್ ಆಸ್ಪತ್ರೆ ದಾಖಲು ಮಾಡಿದ್ದಾರೆ. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ  ಅತ್ಯಾಚಾರವಾಗಿರುವುದನ್ನು ದಢಪಡಿಸಿದ್ದಾರೆ. ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್ ಜಂಗ್ ಆಸ್ಪತ್ರೆಗೆ ರವಾನಿಸುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಬಾಲಕಿಯನ್ನು ನಿರ್ಭಯಾ ಪ್ರಕರಣ ಸಂತ್ರಸ್ಥೆ ದಾಖಲಾಗಿದ್ದ ಅದೇ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನುರಿತ ತಜ್ಞರು ಬಾಲಕಿಯನ್ನು ಪರೀಕ್ಷೆಗೊಳಪಡಿಸಿದ್ದಾರೆ.  ಬಾಲಕಿಯನ್ನು ಪೈಶಾಚಿಕವಾಗಿ ಅತ್ಯಾಚಾರ ಮಾಡಲಾಗಿದ್ದು, ಬಾಲಕಿಯ ಖಾಸಗಿ ಅಂಗ, ಹೊಟ್ಟೆ ಮತ್ತು ದೇಹದ ಇತರೆ ಭಾಗಗಳಲ್ಲಿ ಚಾಕುವಿನಿಂದ ಕೊಯ್ದ ಗುರುತುಗಳು ಪತ್ತೆಯಾಗಿದೆ. ಅಲ್ಲದೆ  ಬಾಲಕಿಯ ಸೂಕ್ಷ್ಮ ಅಂಗಾಂಗಗಳು ತೀವ್ರವಾಗಿ ಗಾಯಗೊಂಡಿದ್ದು, ಬಹುವಿಧದ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಕೇಶವಪುರ ಸ್ಲಂ ಬಳಿ ಇರುವ ರೈಲ್ವೇ ಕ್ರಾಸಿಂಗ್ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ.  ಬಳಿಕ ಆಕೆಯನ್ನು ಮರದ ಮರೆಗೆ ಕರೆದೊಯ್ದು ಭೀಕರವಾಗಿ ಅತ್ಯಾಚಾರ ಮಾಡಿದ್ದಾರೆ. ಮಹಿಳೆಯೊಬ್ಬಳು ಬಹಿರ್ದೆಸೆಗಾಗಿ ಅದೇ ಮರದ ಹಿಂದಕ್ಕೆ ಹೋದಾಗ ಬಾಲಕಿ ರಕ್ತದ ಮಡುವಿನಲ್ಲಿ  ಬಿದ್ದಿರುವುದನ್ನು ಕಂಡು ಎಲ್ಲರಿಗೂ ವಿಚಾರ ತಿಳಿಸಿದ್ದಾಳೆ. ಬಾಲಕಿ ಬಿದ್ದಿದ್ದ ಸ್ಥಳದ ಪಕ್ಕದಲ್ಲಿಯೇ ವೈನ್ ಶಾಪ್ ಇದ್ದು, ಅಲ್ಲಿಗೆ ಬಂದಿದ್ದ ಮದ್ಯಪಾನಿಗಳೇನಾದರೂ ಈ ಕೃತ್ಯವೆಸಗಿರಬಹುದೇ  ಎಂದು ಪೊಲೀಸರು ಶಂಕಿಸುತ್ತಿದ್ದಾರೆ.

ಪ್ರಸ್ತುತ ಬಾಲಕಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾಲಕಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಳೆ. ಬಿಪಿಒ ಉದ್ಯೋಗಿ ಮೇಲೆ  ಬೆಂಗಳೂರಿನಲ್ಲಿ ನಡೆದ ಸಾಮೂಹಿಕ  ಅತ್ಯಾಚಾರ ಪ್ರಕರಣ ಹಸಿರಾಗಿರುವಾಗಲೇ ನಿರ್ಭಯಾ ಪ್ರಕರಣವನ್ನು ನೆನಪಿಸುವ ಘೋರ ದುರಂತ ಸಂಭವಿಸಿರುವುದು ದೇಶದ ಪೊಲೀಸ್ ವ್ಯವಸ್ಥೆಯನ್ನು ಪ್ರಶ್ನಿಸುವಂತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT