ಗ್ಯಾಂಗ್ ರೇಪ್ 
ಪ್ರಧಾನ ಸುದ್ದಿ

ಬೆಂಗಳೂರು ನಂತರ ಮಂಡ್ಯದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವುದಕ್ಕೂ ಮುನ್ನವೇ ಮಂಡ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ...

ಮಂಡ್ಯ: ಬೆಂಗಳೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವುದಕ್ಕೂ ಮುನ್ನವೇ ಮಂಡ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ. 
ಮೈಸೂರು ಮೂಲದ ನಾಲ್ವರು ಯುವಕರ ತಂಡ ವಿದ್ಯಾರ್ಥಿಯೊಬ್ಬಳನ್ನು ಪಾಂಡವಪುರ ತಾಲೂಕಿನ ಬೇಬಿ ಬೆಟ್ಟಕ್ಕೆ ಕರೆದುಕೊಂಡು ಬಂದು ಅತ್ಯಾಚಾರವೆಸಗಿದ್ದಾರೆ. ಕಳೆದ 9 ರಂದು ಮಧ್ಯಾಹ್ನದ ಸಮಯ ಪ್ರಕರಣ ನಡೆದಿದ್ದು, ಅಂದೇ ಆ ಯುವತಿ ಪೊಲೀಸ್ ಕಂಟ್ರೋಲ್ ರೂಂ ಗೆ ಫೋನ್ ಮಾಡಲು ಪ್ರಯತ್ನಿಸಿದ್ದಳು. ಆದರೆ ಈ ಸಂದರ್ಭದಲ್ಲಿ ಯುವಕರ ತಂಡ ಆಕೆಯ ಮೊಬೈಲ್ ಕಿತ್ತುಕೊಂಡಿತ್ತು. ಬಳಿಕ ಆಕೆ ಅಕ್ಟೋಬರ್ 10 ರಂದು ಪಾಂಡವಪುರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಳು.
ಸಂತ್ರಸ್ಥೆ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂದಿತರೆಲ್ಲಾ ಮೈಸೂರು ಮೂಲದವರಾಗಿದ್ದು, ಕೀರ್ತಿಗೌಡ, ಕಿರಣ್ ಗೌಡ, ಮೋಹನ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಮಂಜು ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಮೂವರು ಮಾತ್ರ ರೇಪ್ ಮಾಡಿದ್ದು, ಮಂಜು ಎಂಬಾತ ಜೊತೆಯಲ್ಲಿ ಹೋಗಿದ್ದ ಎಂದು ಹೇಳಲಾಗಿದೆ. ಅತ್ಯಾಚಾರಕ್ಕೆ ಒಳಗಾಗಿರುವ ಯುವತಿಗೆ ಮಂಡ್ಯದ ಮಿಮ್ಸ್’ನ ಮಹಿಳಾ ವಿಶೇಷ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT