ಸಾಹಿತಿ ಕುಂ.ವೀರಭದ್ರಪ್ಪ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕಲಬುರ್ಗಿ ಹತ್ಯೆ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಲಿರುವ ಕುಂ.ವೀರಭದ್ರಪ್ಪ

ಸಂಶೋಧಕ ಡಾ.ಎಂಎಂ ಕಲಬುರ್ಗಿ ಹತ್ಯೆ ಕುರಿತಂತೆ ಸಾಹಿತ್ಯ ಅಕಾಡೆಮಿಯ ಮೌನದ ವಿರುದ್ಧ ಸಾಹಿತ್ಯವಲಯ ತಿರುಗಿಬಿದ್ದಿದ್ದು, ಇದೀಗ ಪ್ರಶಸ್ತಿ ಹಿಂದಿರುಗಿಸುವವರ ಪಟ್ಟಿಗೆ ಸಾಹಿತಿ ಕುಂ.ವೀರಭದ್ರಪ್ಪ ಸೇರಿದ್ದಾರೆ.

ಬಳ್ಳಾರಿ: ಸಂಶೋಧಕ ಡಾ.ಎಂಎಂ ಕಲಬುರ್ಗಿ ಹತ್ಯೆ ಕುರಿತಂತೆ ಸಾಹಿತ್ಯ ಅಕಾಡೆಮಿಯ ಮೌನದ ವಿರುದ್ಧ ಸಾಹಿತ್ಯವಲಯ ತಿರುಗಿಬಿದ್ದಿದ್ದು, ಇದೀಗ ಪ್ರಶಸ್ತಿ ಹಿಂದಿರುಗಿಸುವವರ ಪಟ್ಟಿಗೆ ಸಾಹಿತಿ  ಕುಂ.ವೀರಭದ್ರಪ್ಪ ಸೇರಿದ್ದಾರೆ.

ಈ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ತಮಗೆ ಲಭಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಕೊಟ್ಟೂರಿನಲ್ಲಿ  ಮಾತನಾಡಿದ ವೀರಭದ್ರಪ್ಪ ಅವರು, "2007 ರಲ್ಲಿ ಅರಮನೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿತ್ತು. ಆದರೆ ಎಂಎಂ ಕಲಬುರ್ಗಿಗಿ ಹತ್ಯೆ ವಿಚಾರದಲ್ಲಿ ಸಾಹಿತ್ಯ ಅಕಾಡೆಮಿ  ಮೌನವಾಗಿರುವುದನ್ನು ಖಂಡಿಸಿ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ದಾದ್ರಿ ಘಟನೆ, ಕೇಂದ್ರ ಸರ್ಕಾರದ ಧೋರಣೆಗೆ ಬೇಸತ್ತು ತಾವು ಇನ್ನೂ ಎರಡು ಮೂರು ದಿನಗಳಲ್ಲಿ ತಮ್ಮ ಪ್ರಶಸ್ತಿ  ವಾಪಸ್ ನೀಡುವುದಾಗಿ ಕುಂ.ವೀರಭದ್ರಪ್ಪನವರು" ಎಂದು ಹೇಳಿದ್ದಾರೆ.

ಈ ಹಿಂದೆ ಕೇರಳದ ಜನಪ್ರಿಯ ಸಾಹಿತಿ ಸಾರಾ ಜೋಸೆಫ್ ಅವರು ದಾದ್ರಿ ಪ್ರಕರಣವನ್ನು ವಿರೋಧಿಸಿ ತಮ್ಮ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ವಾಪಸ್ ಮಾಡಿದ್ದರು. ಇನ್ನು ಕರ್ನಾಟಕದ  ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯೆ ಶಶಿದೇಶಪಾಂಡೆ ಅವರು ಕೂಡ ಡಾ.ಎಂಎಂ ಕಲಬುರ್ಗಿ ಹತ್ಯೆ ವಿರೋಧಿಸಿ ತಮ್ಮ ಸದಸ್ಯ ಸ್ಥಾನ ತೊರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT