ಸಾಹಿತಿ ಕುಂ.ವೀರಭದ್ರಪ್ಪ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕಲಬುರ್ಗಿ ಹತ್ಯೆ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಲಿರುವ ಕುಂ.ವೀರಭದ್ರಪ್ಪ

ಸಂಶೋಧಕ ಡಾ.ಎಂಎಂ ಕಲಬುರ್ಗಿ ಹತ್ಯೆ ಕುರಿತಂತೆ ಸಾಹಿತ್ಯ ಅಕಾಡೆಮಿಯ ಮೌನದ ವಿರುದ್ಧ ಸಾಹಿತ್ಯವಲಯ ತಿರುಗಿಬಿದ್ದಿದ್ದು, ಇದೀಗ ಪ್ರಶಸ್ತಿ ಹಿಂದಿರುಗಿಸುವವರ ಪಟ್ಟಿಗೆ ಸಾಹಿತಿ ಕುಂ.ವೀರಭದ್ರಪ್ಪ ಸೇರಿದ್ದಾರೆ.

ಬಳ್ಳಾರಿ: ಸಂಶೋಧಕ ಡಾ.ಎಂಎಂ ಕಲಬುರ್ಗಿ ಹತ್ಯೆ ಕುರಿತಂತೆ ಸಾಹಿತ್ಯ ಅಕಾಡೆಮಿಯ ಮೌನದ ವಿರುದ್ಧ ಸಾಹಿತ್ಯವಲಯ ತಿರುಗಿಬಿದ್ದಿದ್ದು, ಇದೀಗ ಪ್ರಶಸ್ತಿ ಹಿಂದಿರುಗಿಸುವವರ ಪಟ್ಟಿಗೆ ಸಾಹಿತಿ  ಕುಂ.ವೀರಭದ್ರಪ್ಪ ಸೇರಿದ್ದಾರೆ.

ಈ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ತಮಗೆ ಲಭಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಕೊಟ್ಟೂರಿನಲ್ಲಿ  ಮಾತನಾಡಿದ ವೀರಭದ್ರಪ್ಪ ಅವರು, "2007 ರಲ್ಲಿ ಅರಮನೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿತ್ತು. ಆದರೆ ಎಂಎಂ ಕಲಬುರ್ಗಿಗಿ ಹತ್ಯೆ ವಿಚಾರದಲ್ಲಿ ಸಾಹಿತ್ಯ ಅಕಾಡೆಮಿ  ಮೌನವಾಗಿರುವುದನ್ನು ಖಂಡಿಸಿ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ದಾದ್ರಿ ಘಟನೆ, ಕೇಂದ್ರ ಸರ್ಕಾರದ ಧೋರಣೆಗೆ ಬೇಸತ್ತು ತಾವು ಇನ್ನೂ ಎರಡು ಮೂರು ದಿನಗಳಲ್ಲಿ ತಮ್ಮ ಪ್ರಶಸ್ತಿ  ವಾಪಸ್ ನೀಡುವುದಾಗಿ ಕುಂ.ವೀರಭದ್ರಪ್ಪನವರು" ಎಂದು ಹೇಳಿದ್ದಾರೆ.

ಈ ಹಿಂದೆ ಕೇರಳದ ಜನಪ್ರಿಯ ಸಾಹಿತಿ ಸಾರಾ ಜೋಸೆಫ್ ಅವರು ದಾದ್ರಿ ಪ್ರಕರಣವನ್ನು ವಿರೋಧಿಸಿ ತಮ್ಮ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ವಾಪಸ್ ಮಾಡಿದ್ದರು. ಇನ್ನು ಕರ್ನಾಟಕದ  ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯೆ ಶಶಿದೇಶಪಾಂಡೆ ಅವರು ಕೂಡ ಡಾ.ಎಂಎಂ ಕಲಬುರ್ಗಿ ಹತ್ಯೆ ವಿರೋಧಿಸಿ ತಮ್ಮ ಸದಸ್ಯ ಸ್ಥಾನ ತೊರೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT