ಖುರ್ಷಿದ್ ಮಹಮ್ಮದ್ ಕಸೂರಿ ಹಾಗೂ ಸುಧೀಂದ್ರ ಕುಲಕರ್ಣಿ ಅವರಿಂದ ಪುಸ್ತಕ ಬಿಡುಗಡೆ 
ಪ್ರಧಾನ ಸುದ್ದಿ

ಶಿವಸೇನೆ ವಿರೋಧದ ನಡುವೆಯೂ ಪಾಕ್ ಮಾಜಿ ಸಚಿವ ಕಸೂರಿ ಪುಸ್ತಕ ಬಿಡುಗಡೆ

ಶಿವಸೇನೆ ವಿರೋಧದ ನಡುವೆಯೂ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಅವರ 'ನೈದರ್ ಎ ಹಾಕ್ ನಾರ್ ಎ ಡವ್‌'...

ಮುಂಬೈ: ಶಿವಸೇನೆ ವಿರೋಧದ ನಡುವೆಯೂ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಅವರ 'ನೈದರ್ ಎ ಹಾಕ್ ನಾರ್ ಎ ಡವ್‌' ಪುಸ್ತಕವನ್ನು ಸೋಮವಾರ ಸಂಜೆ ಬಿಡುಗಡೆ ಮಾಡಲಾಯಿತು.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ ಅವರ ಮಾಜಿ ಆಪ್ತ ಸುಧೀಂದ್ರ ಕುಲಕರ್ಣಿ ಅವರು, ಕಾರ್ಯಕ್ರಮ ವಿರೋಧಿ ತಮ್ಮ ಮುಖಕ್ಕೆ ಮಸಿ ಬಳೆದಿದ್ದ ಶಿವಸೇನೆ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತ-ಪಾಕ್ ಗಡಿಯಲ್ಲಿನ ಜನ ಶಾಂತಿ ಬಯಸುತ್ತಾರೆ. ಭೂತಕಾಲದ ತಪ್ಪುಗಳನ್ನು ಅಳಿಸುವುದು ಮತ್ತು ಭೇಧಭಾವದ ಹುಳುಕು ತೆಗೆದು ಹಾಕುವುದು ನಮ್ಮ ಕರ್ತವ್ಯವಾಗಿದ್ದು, ಇಂದಿನ ಕಾರ್ಯಕ್ರಮ ಫಲಪ್ರದವಾಗಿದೆ ಎಂದರು.

ಮಹಮ್ಮದ್ ಕಸೂರಿ ಮನೆತನ ಭಾರತೀಯ ಬೇರಿನಲ್ಲಿದೆ. ಅವರ ತಂದೆ ಕ್ವಿಟ್ ಇಂಡಿಯಾ ಚಳುವಳಿಯ ವೇಳೆ ಸೆರೆಯಾಗಿದ್ದರು ಎಂದರು. ಅಲ್ಲದೆ ಮುಂಬೈ ಈಗ ಭಾರತದ ನಗರವಲ್ಲ. ಅಂತಾರಾಷ್ಟ್ರೀಯ ನಗರ ಮತ್ತು ಮಹಾತ್ಮ ಗಾಂಧಿ ಹಾಗೂ ಮೊಹಮ್ಮದ್ ಅಲಿ ಜಿನ್ನಾ ಅವರ ಕರ್ಮಭೂಮಿ ಎಂದರು.

ಇನ್ನು ಈ ವೇಳೆ ಮಾತನಾಡಿದ ಕಸೂರಿ, ಅಭೂತಪೂರ್ವ ರಕ್ಷೆಣೆ ನೀಡಿದ್ದಕ್ಕಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ನಾಸಿರುದ್ದೀನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಶಿವಸೇನೆ ವಿರೋಧದ ಹಿನ್ನೆಲೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ನೆಹರು ಕೇಂದ್ರದ ಸುತ್ತ ಭಾರಿ ಮೂರು ಸುತ್ತಿನ ಭದ್ರತೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT