ಅಸ್ಸಾಮಿನ ಲೇಖಕ ಮತ್ತು ಪತ್ರಕರ್ತ ಹಾಮೆನ್ ಬಾರ್ಗೋಹೇನ್ 
ಪ್ರಧಾನ ಸುದ್ದಿ

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ ಅಸ್ಸಾಮಿನ ಹಾಮೆನ್ ಬಾರ್ಗೋಹೇನ್

ದೇಶದಲ್ಲಿ ಹೆಚ್ಚಿತ್ತಿರುವ ಕೋಮು ಘರ್ಷಣೆ, ಅಸಹನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದೆ ಇರುವುದನ್ನು ವಿರೋಧಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ

ಗೌಹಾಟಿ: ದೇಶದಲ್ಲಿ ಹೆಚ್ಚಿತ್ತಿರುವ ಕೋಮು ಘರ್ಷಣೆ, ಅಸಹನೆ ಮತ್ತು ಅದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದೆ ಇರುವುದನ್ನು ವಿರೋಧಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಲೇಖಕರ ಪಟ್ಟಿಗೆ ಅಸ್ಸಾಮಿನ ಲೇಖಕ ಮತ್ತು ಪತ್ರಕರ್ತ ಹಾಮೆನ್ ಬಾರ್ಗೋಹೇನ್ ಸೇರ್ಪಡೆಯಾಗಿದ್ದು ಅವರು ಕೂಡ ಪ್ರಶಸ್ತಿಯನ್ನು ಹಿಂದಿರುಗಿಸಲು ಮುಂದಾಗಿದ್ದಾರೆ.

ಅಸ್ಸಾಮಿನ ಪ್ರಾದೇಶಿಕ ಪತ್ರಿಕೆಯಲ್ಲಿ ಬರೆದು ಈ ವಿಷಯ ತಿಳಿಸಿರುವ ಬಾರ್ಗೋಹೇನ್ "ದಾಧ್ರಿ ಘಟನೆ ನಡೆದಾಗಿಲಿಂದಲೂ ನನ್ನೊಳಗೆ ಮೌನ ಪ್ರತಿಭಟನೆ ನಡೆಯುತ್ತಲೇ ಇತ್ತು. ಆದರೆ ಅದನ್ನು ವ್ಯಕ್ತಪಡಿಸುವ ವಿಧಾನ ತಿಳಿಯಲಿಲ್ಲ.

"ಈಗ ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆ ವಿರುದ್ಧ ಒಬ್ಬರ ನಂತರ ಒಬ್ಬರು ಕನಿಷ್ಠ ೧೦ ಜನ ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂತಿರುಗಿಸಿರುವಾಗ ನಾನು ನನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸುವ ವಿಧಾನ ತಿಳಿಯಿತು" ಎಂದಿದ್ದಾರೆ.

ಇಂತಹ ನಡೆ ಇಡಲು ಕಾರಣಗಳನ್ನು ವಿವರಿಸಿರುವ ಅವರು "ನಾನು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಲು ದಾಧ್ರಿ ಘಟನೆ ಒಂದೆ ಕಾರಣವಲ್ಲ ಬದಲಾಗಿ ದೇಶದಲ್ಲಿ ದಬ್ಬಾಳಿಕೆಯ ಆಡಳಿತ ಹೆಚ್ಚುತ್ತಿದ್ದು ಭಾರತೀಯ ನಾಗರಿಕತೆ ಮತ್ತು ಸಂಸ್ಕೃತಿಯನ್ನು ವಿನಾಶದತ್ತ ಕೊಂಡೊಯ್ಯುತ್ತಿರುವುದನ್ನು ಪ್ರತಿಭಟಿಸಿದ್ದೇನೆ" ಎಂದು ಅವರು ತಿಳಿಸಿದ್ದಾರೆ.

ಬಾರ್ಗೋಹೇನ್ ಅವರ 'ಪಿತಾ ಪುತ್ರ' (ತಂದೆ ಮಗ) ಕಾದಂಬರಿಗೆ ೧೯೭೮ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT