ಔಷಧ ಮಾರಾಟ ಬಂದ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನಾಳೆ ರಾಷ್ಟ್ರಾದ್ಯಂತ ಔಷಧ ಅಂಗಡಿ ಬಂದ್

ಕೇಂದ್ರ ಸರ್ಕಾರವು ಔಷಧ ಮತ್ತು ಕಾಂತಿವರ್ಧಕ ಕಾಯಿದೆಗೆ ತಿದ್ದುಪಡಿ ತಂದು ಆನ್ ಲೈನ್ ಮುಖಾಂತರ ಔಷಧ ಮಾರಾಟಕ್ಕೆ ಹೊರಟಿರುವ ಕ್ರಮ ಖಂಡಿಸಿ ಔಷಧ ವ್ಯಾಪಾರಿಗಳು ಅ. 14 ರಂದು ರಾಷ್ಟ್ರಾದ್ಯಂತ ಔಷಧ ಅಂಗಡಿ ಬಂದ್‍ಗೆ ಕರೆ ನೀಡಿದ್ದಾರೆ...

ಬೆಂಗಳೂರು: ಕೇಂದ್ರ ಸರ್ಕಾರವು ಔಷಧ ಮತ್ತು ಕಾಂತಿವರ್ಧಕ ಕಾಯಿದೆಗೆ ತಿದ್ದುಪಡಿ ತಂದು ಆನ್ ಲೈನ್ ಮುಖಾಂತರ ಔಷಧ ಮಾರಾಟಕ್ಕೆ ಹೊರಟಿರುವ ಕ್ರಮ ಖಂಡಿಸಿ ಔಷಧ ವ್ಯಾಪಾರಿಗಳು ಅ. 14 ರಂದು ರಾಷ್ಟ್ರಾದ್ಯಂತ ಔಷಧ ಅಂಗಡಿ ಬಂದ್‍ಗೆ ಕರೆ ನೀಡಿದ್ದಾರೆ.

ಇದಕ್ಕೆ ಬೆಂಬಲ ವ್ಯಕ್ತಪಡಿಸಿರುವ ಬೃಹತ್ ಬೆಂಗಳೂರು ಕೆಮಿಸ್ಟ್ಸ್ ಆ್ಯಂಡ್ ಡ್ರಗ್ಗಿಸ್ಟ್ಸ್ಅಸೋಸಿಯೇಷನ್ ಅಂದು ಬೆಳಗ್ಗೆ ಸುಮಾರು 5 ಸಾವಿರ ಮಂದಿ ಜತೆಗೂಡಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಿದೆ. ಆಸ್ಪತ್ರೆಗಳಲ್ಲಿರುವ ಔಷಧ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಔಷಧ ಅಂಗಡಿಗಳು ಬಂದ್ ಆಗಲಿವೆ. ಈಗಾಗಲೇ ಕೆಲವು ಅಂಗಡಿಗಳಲ್ಲಿ ವೈದ್ಯರ ಶಿಫಾರಸು ಇಲ್ಲದೆ ಔಷಧ ನೀಡುತ್ತಿರುವುದರಿಂದ ಅನಾಹುತ ಹೆಚ್ಚಾಗುತ್ತಿದೆ. ಒಂದು ವೇಳೆ ಕೇಂದ್ರ ಸರ್ಕಾರ ಕಾಯಿದೆಗೆ ತಿದ್ದುಪಡಿ ತಂದು ಆನ್‍ಲೈನ್‍ನಲ್ಲಿ ಔಷಧ ದೊರೆತರೆ ದೇಶದ ಪರಿಸ್ಥಿತಿ ಏನಾಗಬಹುದು?

ಡಿಜಿಟಲ್ ಇಂಡಿಯಾ ಮಾಡಲು ಹೊರಟಿರುವ ಕೇಂದ್ರ ಕಾರ್ಪೊರೇಟ್ ಕುಳಗಳ ಹಿಡಿತಕ್ಕೆ ಸಿಲುಕಿ ಜನರ ಜೀವನದೊಂದಿಗೆ ಆಟವಾಡಲು ಹೊರಟಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಎಂ.ಕೆ. ಮಾಯಣ್ಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಭಾರತವನ್ನು ಡಿಜಿಟಲ್ ಇಂಡಿಯಾವನ್ನಾಗಿ ರೂಪಿಸುವುದು ಒಳ್ಳೆಯದು. ಆದರೆ ಸೂಕ್ಷ್ಮ ವಿಚಾರಕ್ಕೂ ಅನ್ವಯಿಸುವುದು ಸರಿಯಲ್ಲ. ದೇಶಾದ್ಯಂತ 8 ಲಕ್ಷ ಔಷಧ ಉದ್ಯಮಿಗಳಿದ್ದಾರೆ. ಒಂದೂವರೆ ಕೋಟಿ ಔಷಧ ಅಂಗಡಿಗಳಿವೆ. ಆನ್‍ಲೈನ್‍ನಲ್ಲಿ ಮಾರಾಟಕ್ಕೆ ಅವಕಾಶ ನೀಡಿದರೆ ಇವರೆಲ್ಲ ಬೀದಿ ಪಾಲಾಗುತ್ತಾರೆ. ಬಹುರಾಷ್ಟ್ರೀಯ ಕಂಪನಿಗಳು ಲಾಭ ಮಾಡಿಕೊಳ್ಳುತ್ತಾರೆ. ನಿರ್ಬಂಧಿತ ಔಷಧ ಜನರ ಕೈಗೆ ಸಿಕ್ಕರೆ ದುರಂತ ಸಂಭವಿಸುವುದು ಗ್ಯಾರಂಟಿ. ಆನ್‍ಲೈನ್‍ನಲ್ಲಿ ಬುಕ್ಕಿಂಗ್ ಮಾಡಿ ತಂದು ಕೊಡುವಷ್ಟರಲ್ಲಿ ಜೀವ ಹೋಗಿರುತ್ತದೆ.

ಏನೇ ಆದರೂ ಆನ್‍ಲೈನ್ ಮುಖಾಂತರ ಔಷಧ ಮಾರಾಟ  ಸರಿಯಲ್ಲ. ಇದನ್ನು ಎಲ್ಲರೂ ತೀವ್ರವಾಗಿ ಖಂಡಿಸಬೇಕು ಎಂದು ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಕೆ. ಕೃಷ್ಣಕುಮಾರ್, ವಿ.ಕೆ. ರಾಘವೇಂದ್ರ, ರಾಜು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT