ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ 
ಪ್ರಧಾನ ಸುದ್ದಿ

ಜಗನ್ ಉಪಾವಾಸಕ್ಕೆ ಪೊಲೀಸರ ಅಡ್ಡಿ; ಆಸ್ಪತ್ರೆಗೆ ದಾಖಲು

ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿದ್ದ ಅನಿರ್ಧಿಷ್ಟ ಕಾಲದವರೆಗೆ ಉಪವಾಸಕ್ಕೆ ಅಡ್ಡಿ ಮಾಡಿರುವ ಪೊಲೀಸರು ಮಂಗಳವಾರ ಅವರನ್ನು ಆಸ್ಪತ್ರೆಗೆ

ಗುಂಟೂರು: ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿದ್ದ ಅನಿರ್ಧಿಷ್ಟ ಕಾಲದವರೆಗೆ ಉಪವಾಸಕ್ಕೆ ಅಡ್ಡಿ ಮಾಡಿರುವ ಪೊಲೀಸರು ಮಂಗಳವಾರ ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿದ್ದು, ಬಲವಂತವಾಗಿ ಅವರಿಗೆ ದ್ರವ ಪದಾರ್ಥಗಳನ್ನು ನೀಡಲಾಗಿದೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ವಿರೋಧ ಪಕ್ಷದ ನಾಯಕ ಜಗನ್ ಅವರು ಆರು ದಿನಗಳಿಂದ ಉಪವಾಸ ನಡೆಸಿದ್ದರು.

ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದರಿಂದ ಪೊಲೀಸರು ಸುಮಾರು ಬೆಳಗ್ಗೆ ೪ ಘಂಟೆಗೆ ಜಗನ್ ಉಪವಾಸ ನಡೆಸುತ್ತಿದ್ದ ಜಾಗಕ್ಕೆ ಬಂದು, ಆಂಬ್ಯುಲೆನ್ಸ್ ನೆರವಿನಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅವರನ್ನು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ.

ಜಗನ್ ಅವರ ತಾಯಿ ವಿಜಯಮ್ಮ, ಪತ್ನಿ ಭಾರತಿ ಮತ್ತು ಇತರ ಕುಟುಂಬ ಸದಸ್ಯರು ಹಾಗು ಪಕ್ಷದ ಸದಸ್ಯರು ಅವರನ್ನು ಕಾಣಲು ಆಸ್ಪತ್ರೆಗೆ ಬಂದಿದ್ದಾರೆ.

ವಿವಿಧ ಪ್ರದೇಶಗಳಿಂದ ಬಂದಿದ್ದ ಪಕ್ಷದ ಕಾರ್ಯಕರ್ತರ ಆಕ್ರೋಶವನ್ನು ಪೊಲೀಸರು ಎದುರಿಸಬೇಕಾಗಿ ಬಂತು ಎಂದು ತಿಳಿದುಬಂದಿದೆ. ಸರ್ಕಾರದ ಈ ನಡೆಯಿಂದ ತೀವ್ರ ಆಕ್ರೋಶಗೊಂಡಿರುವ ಕಾರ್ಯಕರ್ತರು ಮುಂದೇನು ಮಾಡಬೇಕೆಂದು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT