ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ 
ಪ್ರಧಾನ ಸುದ್ದಿ

ಜಗನ್ ಉಪಾವಾಸಕ್ಕೆ ಪೊಲೀಸರ ಅಡ್ಡಿ; ಆಸ್ಪತ್ರೆಗೆ ದಾಖಲು

ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿದ್ದ ಅನಿರ್ಧಿಷ್ಟ ಕಾಲದವರೆಗೆ ಉಪವಾಸಕ್ಕೆ ಅಡ್ಡಿ ಮಾಡಿರುವ ಪೊಲೀಸರು ಮಂಗಳವಾರ ಅವರನ್ನು ಆಸ್ಪತ್ರೆಗೆ

ಗುಂಟೂರು: ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿದ್ದ ಅನಿರ್ಧಿಷ್ಟ ಕಾಲದವರೆಗೆ ಉಪವಾಸಕ್ಕೆ ಅಡ್ಡಿ ಮಾಡಿರುವ ಪೊಲೀಸರು ಮಂಗಳವಾರ ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿದ್ದು, ಬಲವಂತವಾಗಿ ಅವರಿಗೆ ದ್ರವ ಪದಾರ್ಥಗಳನ್ನು ನೀಡಲಾಗಿದೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ವಿರೋಧ ಪಕ್ಷದ ನಾಯಕ ಜಗನ್ ಅವರು ಆರು ದಿನಗಳಿಂದ ಉಪವಾಸ ನಡೆಸಿದ್ದರು.

ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದರಿಂದ ಪೊಲೀಸರು ಸುಮಾರು ಬೆಳಗ್ಗೆ ೪ ಘಂಟೆಗೆ ಜಗನ್ ಉಪವಾಸ ನಡೆಸುತ್ತಿದ್ದ ಜಾಗಕ್ಕೆ ಬಂದು, ಆಂಬ್ಯುಲೆನ್ಸ್ ನೆರವಿನಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅವರನ್ನು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ.

ಜಗನ್ ಅವರ ತಾಯಿ ವಿಜಯಮ್ಮ, ಪತ್ನಿ ಭಾರತಿ ಮತ್ತು ಇತರ ಕುಟುಂಬ ಸದಸ್ಯರು ಹಾಗು ಪಕ್ಷದ ಸದಸ್ಯರು ಅವರನ್ನು ಕಾಣಲು ಆಸ್ಪತ್ರೆಗೆ ಬಂದಿದ್ದಾರೆ.

ವಿವಿಧ ಪ್ರದೇಶಗಳಿಂದ ಬಂದಿದ್ದ ಪಕ್ಷದ ಕಾರ್ಯಕರ್ತರ ಆಕ್ರೋಶವನ್ನು ಪೊಲೀಸರು ಎದುರಿಸಬೇಕಾಗಿ ಬಂತು ಎಂದು ತಿಳಿದುಬಂದಿದೆ. ಸರ್ಕಾರದ ಈ ನಡೆಯಿಂದ ತೀವ್ರ ಆಕ್ರೋಶಗೊಂಡಿರುವ ಕಾರ್ಯಕರ್ತರು ಮುಂದೇನು ಮಾಡಬೇಕೆಂದು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

SCROLL FOR NEXT