ಪಂಜಾಬಿನ ಹಿರಿಯ ಲೇಖಕಿ ದಲಿಪ್ ಕೌರ್ ತಿವಾನ 
ಪ್ರಧಾನ ಸುದ್ದಿ

ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಂಜಾಬಿ ಲೇಖಕಿ ದಲಿಪ್ ಕೌರ್ ತಿವಾನ

ದೇಶದಲ್ಲಿ ಹೆಚ್ಚುತ್ತಿರುವ ಕೋಮು ಘರ್ಷಣೆ, ಅಸಹನೆ, ಅದಕ್ಕೆ ಕೇಂದ್ರ ಸರ್ಕಾರ ತಳೆದಿರುವ ದಿವ್ಯ ಮೌನ ವಿರೋಧಿಸಿ ಹಲವಾರು ಹಿರಿಯ ಲೇಖಕರು ಇಲ್ಲಿಯವರೆಗೆ 'ಕೇಂದ್ರ ಸಾಹಿತ್ಯ ಅಕಾಡೆಮಿ'

ದೇಶದಲ್ಲಿ ಹೆಚ್ಚುತ್ತಿರುವ ಕೋಮು ಘರ್ಷಣೆ, ಅಸಹನೆ, ಅದಕ್ಕೆ ಕೇಂದ್ರ ಸರ್ಕಾರ ತಳೆದಿರುವ ದಿವ್ಯ ಮೌನ ವಿರೋಧಿಸಿ ಹಲವಾರು ಹಿರಿಯ ಲೇಖಕರು ಇಲ್ಲಿಯವರೆಗೆ 'ಕೇಂದ್ರ ಸಾಹಿತ್ಯ ಅಕಾಡೆಮಿ' ಪ್ರಶಸ್ತಿ ಹಿಂದಿರುಗಿಸಿದ್ದಾರೆ. ಈಗ ಆ ಸಾಲಿಗೆ ಸೇರಿರುವ ಪಂಜಾಬಿನ ಹಿರಿಯ ಲೇಖಕಿ ದಲಿಪ್ ಕೌರ್ ತಿವಾನ ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮಶ್ರೀ' ಹಿಂದಿರುಗಿಸುವ ಮೂಲಕ ಪ್ರತಿಭಟಿಸಿದ್ದಾರೆ.

೧೯೮೪ ರಲ್ಲಿ ಸಿಖ್ಖರ ಮೇಲೆ ಆದ ದೌರ್ಜನ್ಯದಂತೆಯೇ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಪ್ರಶಸ್ತಿ ಹಿಂದಿರುಗಿಸುತ್ತಿರುವುದಾಗಿ ಲೇಖಕಿ ತಿಳಿಸಿದ್ದಾರೆ. ಗೌತಮ ಬುದ್ಧ ಮತ್ತು ಗುರುನಾನಕ್ ಜನಿಸಿದ ನಾಡಿನಲ್ಲಿ ಈ ಘಟನೆಗಳು ದುರದೃಷ್ಟಕರ ಎಂದಿದ್ದಾರೆ.

ಸತ್ಯ ಮತ್ತು ನ್ಯಾಯಕ್ಕಾಗಿ ನಿಂತವರನ್ನು ಕೊಲ್ಲುವುದು ದೇವರ ಕಣ್ಣಿನಲ್ಲಿ ಪಾಪದ ಕೆಲಸ. ಆದುದರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ ಎಂದು ಅವರು ಸಂಶೋಧಕ ಕಲ್ಬುರ್ಗಿ ಅವರ ಕೊಲೆಯನ್ನು ಪರೋಕ್ಷವಾಗಿ ವಿರೋಧಿಸಿ ಹೇಳಿದ್ದಾರೆ.

ಸದ್ಯದ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಇಲ್ಲಿಯವರೆಗೂ ಸುಮಾರು ೨೦ಕ್ಕೂ ಹೆಚ್ಚು ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದು, ಮೊದಲ ಬಾರಿಗೆ ಪದ್ಮ ಪ್ರಶಸ್ತಿಯನ್ನು ಹಿಂದಿರುಗಿಸಿರುವುದು ಕೌರ್ ಅವರೇ ಮೊದಲು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT