ಯದುವೀರ ಒಡೆಯರ್ - ಪ್ರಮೋದಾ ದೇವಿ 
ಪ್ರಧಾನ ಸುದ್ದಿ

ಯದುವೀರ ಒಡೆಯರ್, ಪ್ರಮೋದಾ ದೇವಿಗೆ ಕೋರ್ಟ್ ನೋಟಿಸ್

ಖಾಸಗಿ ದರ್ಬಾರ್ ಸಂಭ್ರಮದಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಮಾತೆ ಪ್ರಮೋದಾ ದೇವಿ ಅವರಿಗೆ ಬುಧವಾರ...

ಮೈಸೂರು: ಖಾಸಗಿ ದರ್ಬಾರ್ ಸಂಭ್ರಮದಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಮಾತೆ ಪ್ರಮೋದಾ ದೇವಿ ಅವರಿಗೆ ಬುಧವಾರ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ್ ಒಡೆಯರ್ ದತ್ತು ಸ್ವೀಕಾರ ಪ್ರಶ್ನಿಸಿ ಚದುರಂಗ ಕಾಂತರಾಜೇ ಅರಸ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡಿಸಿದ ಮೈಸೂರು ಜಿಲ್ಲಾ ನ್ಯಾಯಾಲಯ, ರಾಜಮಾತೆ ಪ್ರಮೋದಾದೇವಿ ಮತ್ತು ಯುವರಾಜ ಯದುವೀರ್ ಒಡೆಯರ್ ಅವರಿಗೆ ನೋಟಿಸ್ ನೀಡಿದೆ.

ಹಿಂದೂ ಕಾಯ್ದೆ ಪ್ರಕಾರ ಯದುವೀರ್ ಅವರನ್ನು ದತ್ತು ಸ್ವೀಕರಿಸಲು ಬರುವುದಿಲ್ಲ. 17 ವರ್ಷದೊಳಗಿನವರನ್ನು ದತ್ತು ಸ್ವೀಕರಿಸಬಹುದಾಗಿದೆ. ಆದರೆ ಯದುವೀರ್ ಅವರಿಗೆ 22 ವರ್ಷ. ಹೀಗಾಗಿ ಯದುವೀರ್ ದತ್ತು ಸ್ವೀಕಾರ ರದ್ದುಗೊಳಿಸಬೇಕು ಎಂದು ಕೋರಿ ಕಾಂತರಾಜೇ ಅರಸ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಜಮನೆತನದ ಒಡೆಯರ್ ಉತ್ತರಾಧಿಕಾರಿಯನ್ನಾಗಿ ಮಾಡಲು ಚಾಮರಾಜ ಒಡೆಯರ್ ಅವರ ಹಿರಿಯ ಪುತ್ರಿ ಗಾಯಿತ್ರಿದೇವಿ ಮಗಳಾದ ತ್ರಿಪುರಸುಂದರಿ ದೇವಿ ಮತ್ತು ಸ್ವರೂಪ್ ಆನಂದ್ ಗೋಪಾಲರಾಜೇ ಅರಸ್ ದಂಪತಿಗಳ ಪುತ್ರನಾಗಿರುವ ಯದುವೀರ್ ಒಡೆಯರ್ (22ವರ್ಷ)ಅವರನ್ನು ಪ್ರಮೋದಾದೇವಿ ದತ್ತು ಸ್ವೀಕರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT