ಗೋವಾ ಕೊಂಕಣಿ ಸಾಹಿತಿ ದಾಮೋದರ್ ಮೌಜೋ 
ಪ್ರಧಾನ ಸುದ್ದಿ

ಪ್ರಶಸ್ತಿ ಹಿಂದಿರುಗಿಸದೆ ಪ್ರತಿಭಟನೆ ನಡೆಸಲು ಗೋವಾ ಸಾಹಿತಿಗಳ ನಿರ್ಧಾರ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವ್ಯಕ್ತವಾಗುತ್ತಿರುವ ಅಸಹನೆಯ ಸಂಸ್ಕೃತಿಯನ್ನು ಖಂಡಿಸಿರುವ ಗೋವಾ ಬರಹಗಾರರು, ಪ್ರಶಸ್ತಿ ಹಿಂದಿರುಗಿಸುವುದಿಲ್ಲ ಎಂದು ಗುರುವಾರ

ಪಣಜಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವ್ಯಕ್ತವಾಗುತ್ತಿರುವ ಅಸಹನೆಯ ಸಂಸ್ಕೃತಿಯನ್ನು ಖಂಡಿಸಿರುವ ಗೋವಾ ಬರಹಗಾರರು, ಪ್ರಶಸ್ತಿ ಹಿಂದಿರುಗಿಸುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.

ಪಣಜಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ೧೧ ಕೊಂಕಣಿ ಭಾಷೆಯ ಪ್ರಶಸ್ತಿ ವಿಜೇತರು ಈ ನಿರ್ಧಾರ ಪ್ರಕಟಿಸಿದ್ದಾರೆ.

"ಸಂಶೋಧಕ ಎಂ ಎಂ ಕಲ್ಬುರ್ಗಿ ಅವರ ಕೊಲೆಯ ಬಗ್ಗೆ ಸಾಹಿತ್ಯ ಅಕಾಡೆಮಿ ಯಾವುದೇ ಪ್ರತಿಕ್ರಿಯೆ ತೋರದೆ ಇರುವುದು ಆಘಾತವಾಗಿದೆ. ನಾವು ಪ್ರಶಸ್ತಿಯನ್ನು ಹಿಂದಿರುಗಿಸುವುದು ಬೇಡವೆಂದು ನಿರ್ಧರಿಸಿದ್ದರು ನಮ್ಮ ಭಾವನೆಗಳನ್ನು ಸಾಹಿತ್ಯ ಅಕಾಡೆಮಿಗೆ ತಿಳಿಸಲಿದ್ದೇವೆ. ಸಂಸ್ಥೆ ಆಯೋಜಿಸುವ ಸಭೆಯಲ್ಲಿ ಇದರ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸುತ್ತೇವೆ" ಎಂದು ಸಾಹಿತಿ ದಾಮೋದರ್ ಮೌಜೋ ತಿಳಿಸಿದ್ದಾರೆ.

ಈ ಪತ್ರಿಕಾ ಗೋಷ್ಠಿಯಲ್ಲಿ ಪುಂಡಲೀಕ್ ನಾಯಕ್, ದಿಲೀಪ್ ಬೋರ್ಕರ್, ದತ್ತ ನಾಯಕ್, ಹೇಮಾ ನಾಯಕ್, ನಾಗೇಶ್ ಕರ್ಮಾಲಿ, ಎನ್ ಶಿವದಾಸ್ ಕೂಡ ಮಾತನಾಡಿದ್ದಾರೆ. ಇವರೆಲ್ಲರೂ ಕೊಂಕಣಿ ಸಾಹಿತ್ಯಕ್ಕೆ ಈ ಪ್ರತಿಷ್ಟಿತ ಪ್ರಶಸ್ತಿ ಪಡೆದವರು.

೪೬ ನೆ ಗೋವಾ ಅಂತರಾಷ್ಟ್ರೀಯ ಸಿನೆಮೋತ್ಸವದ ವೇಳೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಕೂಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT