ನರೇಂದ್ರ ಮೋದಿ ಮತ್ತು ಸೋನಿಯಾ ಗಾಂಧಿ 
ಪ್ರಧಾನ ಸುದ್ದಿ

ಮೋದಿ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರುತ್ತಿದ್ದಾರೆ: ಸೋನಿಯಾ ಗಾಂಧಿ

ನರೇಂದ್ರ ಮೋದಿ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ....

ಬಕ್ಸರ್‌/ಬಿಹಾರ : ನರೇಂದ್ರ ಮೋದಿ  ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಬಿಹಾರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದುದರಿಂದಲೇ ಮೋದಿ ಅವರು ದೇಶದ ಪ್ರಧಾನಿಯಾದರು. ಆದರೆ, ಈಗ ಅವರ ಸರ್ಕಾರದ ನೀತಿಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿ ಎಂದು ಅವರು ಆರೋಪಿಸಿದರು.

ದೇಶದಲ್ಲಿ ಕೋಮು ದ್ವೇಷ ಬಿತ್ತಲಾಗುತ್ತಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಬುದ್ಧಿಜೀವಿಗಳು ಜೀವ ಭಯದಲ್ಲಿ ಬದುಕುವ ವಾತಾವರಣ ಸೃಷ್ಟಿಯಾಗಿದೆ ಎಂದು ಸೋನಿಯಾ ಗಾಂಧಿ ಆತಂಕ ವ್ಯಕ್ತ ಪಡಿಸಿದರು.

ಚುನಾವಣೆ ವೇಳೆ ಮೋದಿ ರೈತರು, ಮಹಿಳೆಯರು ಹಾಗೂ ಯುವ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಅಗತ್ಯ ವಸ್ತುಗಳ ಬೆಲೆ ಹಾಗೂ ತರಕಾರಿ ಬೆಲೆಗಳು ಗಗನಮುಖಿಯಾಗಿದ್ದು ಅವುಗಳನ್ನು ನಿಯಂತ್ರಿಸಲು ಮೋದಿ ವಿಫಲರಾಗಿದ್ದಾರೆ ಎಂದ ಆಪಾದಿಸಿದರು.



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT