ನರೇಂದ್ರ ಮೋದಿ ಮತ್ತು ಸೋನಿಯಾ ಗಾಂಧಿ 
ಪ್ರಧಾನ ಸುದ್ದಿ

ಮೋದಿ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರುತ್ತಿದ್ದಾರೆ: ಸೋನಿಯಾ ಗಾಂಧಿ

ನರೇಂದ್ರ ಮೋದಿ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ....

ಬಕ್ಸರ್‌/ಬಿಹಾರ : ನರೇಂದ್ರ ಮೋದಿ  ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಬಿಹಾರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದುದರಿಂದಲೇ ಮೋದಿ ಅವರು ದೇಶದ ಪ್ರಧಾನಿಯಾದರು. ಆದರೆ, ಈಗ ಅವರ ಸರ್ಕಾರದ ನೀತಿಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿ ಎಂದು ಅವರು ಆರೋಪಿಸಿದರು.

ದೇಶದಲ್ಲಿ ಕೋಮು ದ್ವೇಷ ಬಿತ್ತಲಾಗುತ್ತಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಬುದ್ಧಿಜೀವಿಗಳು ಜೀವ ಭಯದಲ್ಲಿ ಬದುಕುವ ವಾತಾವರಣ ಸೃಷ್ಟಿಯಾಗಿದೆ ಎಂದು ಸೋನಿಯಾ ಗಾಂಧಿ ಆತಂಕ ವ್ಯಕ್ತ ಪಡಿಸಿದರು.

ಚುನಾವಣೆ ವೇಳೆ ಮೋದಿ ರೈತರು, ಮಹಿಳೆಯರು ಹಾಗೂ ಯುವ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಅಗತ್ಯ ವಸ್ತುಗಳ ಬೆಲೆ ಹಾಗೂ ತರಕಾರಿ ಬೆಲೆಗಳು ಗಗನಮುಖಿಯಾಗಿದ್ದು ಅವುಗಳನ್ನು ನಿಯಂತ್ರಿಸಲು ಮೋದಿ ವಿಫಲರಾಗಿದ್ದಾರೆ ಎಂದ ಆಪಾದಿಸಿದರು.



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT