ಪೇಜಾವರ ಶ್ರೀ 
ಪ್ರಧಾನ ಸುದ್ದಿ

ಬೆಳಗಾವಿಯಲ್ಲಿ ಪೇಜಾವರ ಶ್ರೀಗಳ ಕಾರಿನ ಮೇಲೆ ಕಲ್ಲು ತೂರಾಟ

ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಕಾರು ಹಾಗೂ ಅವರ ಬೆಂಬಲಿಗರ ಕಾರುಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಮಂಗಳವಾರ...

ಬೆಳಗಾವಿ: ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಕಾರು ಹಾಗೂ ಅವರ ಬೆಂಬಲಿಗರ ಕಾರುಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಮಂಗಳವಾರ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌ಪಿಡಿ ಕ್ರಾಸ್‌ನ ಕೃಷ್ಣಮಠದ ಬಳಿ ಶ್ರೀಗಳು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ ಮೇಲೆ ಹಾಗೂ ಟೆಂಪೊ ಟ್ರಾವೆಲರ್ ಮೇಲೆ ಇಂದು ಬೆಳಗ್ಗೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಘಟನೆಯ ನಂತರ ಪೇಜಾವರ ಶ್ರೀಗಳು ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಕಿಡಿಗೇಡಿಗಳು ತಮ್ಮ ಕಾರಿಮ ಮೇಲೆ ಕಲ್ಲೆಸೆತದ ಬಗ್ಗೆ ಶ್ರೀಗಳು ಸಂಸದರಿಗೆ ಚರ್ಚಿಸಿದ್ದಾರೆ.

ಚರ್ಚೆಯ ಬಳಿಕ ಸುರೇಶ್ ಅಂಗಡಿ ಅವರು ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತ ಸಲಹೆಗಾರ ಕೆಂಪಯ್ಯ ಅವರಿಗೆ ಕರೆ ಮಾಡಿ ಘಟನೆ ಕುರಿತು ವಿವರ ನೀಡಿದ್ದಾರೆ. ಅಲ್ಲದೆ ಶೀಘ್ರ ಆರೋಪಿಗಳನ್ನು ಬಂಧಿಸಿ, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT