ಸಿಎಂ ಸಿದ್ದರಾಮಯ್ಯ (ಸಂಗ್ರಹಚಿತ್ರ) 
ಪ್ರಧಾನ ಸುದ್ದಿ

ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ರೈತರಿಂದ ದಸರಾಗೆ ಚಾಲನೆ: ಸಿಎಂ

ಬರ ಮತ್ತು ಬೆಳೆನಾಶದಂತಹ ಸಮಸ್ಯೆಗಳಿಂದಾಗಿ ಬಳಲುತ್ತಿರುವ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಬಾರಿಯ ದಸರಾಗೆ ಪ್ರಗತಿಪರ ರೈತರಿಂದಲೇ ಚಾಲನೆ ಕೊಡಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...

ಮೈಸೂರು: ಬರ ಮತ್ತು ಬೆಳೆನಾಶದಂತಹ ಸಮಸ್ಯೆಗಳಿಂದಾಗಿ ಬಳಲುತ್ತಿರುವ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಬಾರಿಯ ದಸರಾಗೆ ಪ್ರಗತಿಪರ ರೈತರಿಂದಲೇ ಚಾಲನೆ  ಕೊಡಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ನಡೆದ ನಂದಿಧ್ವಜ ಪೂಜಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ  ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಬರಗಾಲ ಪರಿಸ್ಥಿತಿ ತಲೆದೋರಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ. ರೈತರಲ್ಲಿ  ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಬಾರಿ ದಸರಾಕ್ಕೆ ಪ್ರಗತಿಪರ ರೈತರಾದ ಪುಟ್ಟಣ್ಣಯ ಅವರಿಂದ ಚಾಲನೆ ಕೊಡಿಸಲಾಯಿತು ಎಂದು ಹೇಳಿದರು.

"ಮುಂಗಾರು ಕೈ ಕೊಟ್ಟಿದ್ದರೂ ಹಿಂಗಾರು ಬೆಳೆ ಉತ್ತಮವಾಗಿ ಬರುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರೈತರು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಲಿ ಎಂದು  ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ ಅವರು, "ರೈತರ ನೆರವಿಗೆ ರಾಜ್ಯ ಸರ್ಕಾರ  ಬದ್ಧ, ಆದರೆ ಕೇಂದ್ರ ಸರ್ಕಾರ ಯಾವ ಪರಿಹಾರವನ್ನು ಬಿಡುಗಡೆ ಮಾಡಲಾಗಿಲ್ಲ. ಅದಾಗ್ಯೂ ರಾಜ್ಯದ ಸಮಗ್ರ ಚಿತ್ರಣವನ್ನು ಗಮನದಲ್ಲಿರಿಸಿಕೊಂಡು ಕೆಲಸ ಮಾಡಲಾಗುತ್ತಿದೆ. ಈಗಾಗಲೇ  ಪರಿಹಾರ ವಿತರಣಾ ಕಾರ್ಯ ಕೈಗೊಂಡಿದ್ದು, ಬಡ್ಡಿ ಮನ್ನಾಕ್ಕೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT