ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ನಂದಿಧ್ವಜ ಪೂಜೆ ವೇಳೆ ಮತ್ತೆ ಗೊಂದಲ

ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮುನ್ನ ನಡೆಯುವ ನಂದಿಧ್ವಜ ಪೂಜಾ ಕಾರ್ಯಕ್ರಮದ ವೇಳೆ ಗೊಂದಲ ಉಂಟಾಗಿತ್ತು...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮುನ್ನ ನಡೆಯುವ ನಂದಿಧ್ವಜ ಪೂಜಾ ಕಾರ್ಯಕ್ರಮದ ವೇಳೆ ಗೊಂದಲ ಉಂಟಾಗಿತ್ತು.

ಅರಮನೆಯ ಬಲರಾಮ ದ್ವಾರದಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಈ ಬಾರಿ ಕೂಡ ಎರಡು ನಂದಿಧ್ವಜ ಆಗಮಿಸಿದ್ದು,  ಒಂದು ಧ್ವಜಕ್ಕೆ ಪೂಜೆ ಸಲ್ಲಿಸಿ ಜಂಬೂಸವಾರಿಗೆ ಚಾಲನೆ  ನೀಡುವುದು ಇಲ್ಲಿಯವರೆಗೆ ನಡೆದುಕೊಂಡು ಬಂದಿರುವ ಪದ್ದತಿಯಾಗಿದೆ. ಆದರೆ ಪೂಜೆಗೆ ಗೌರಿಶಂಕರ ಮತ್ತು ಗುರು ಮಲ್ಲೇಶ್ವರ ಮಠದಿಂದ ಎರಡು ನಂದಿಧ್ವಜ ಆಗಮಿಸಿದ್ದು, ಕಳೆದ  ವರ್ಷದಂತೆ ಈ ವರ್ಷವೂ ನಂದಿಧ್ವಜ ಪೂಜೆಯಲ್ಲಿ ಗೊಂದಲ ಉಂಟಾಗಿತ್ತು ಎಂದು ತಿಳಿದುಬಂದಿದೆ.

2015. ಕ್ರಿ.ಶ. 1640ರಲ್ಲಿ ಶ್ರೀರಂಗಪಟ್ಟಣದಲ್ಲಿ ಆರಂಭವಾದ ಜಂಬೂಸವಾರಿ ಸಾಂಪ್ರದಾಯಿಕ ಮೆರವಣಿಗೆಗೆ, ನಾಡಿನ ಮುಖ್ಯಮಂತ್ರಿಗಳು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಅಧಿಕೃತ  ಚಾಲನೆ ನೀಡುವುದು ಪದ್ದತಿ. ಸುತ್ತೂರು ಮಠದಲ್ಲಿ ಶ್ರೀಗಳ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಾಹ್ನ 12.07 ಗಂಟೆಯಿಂದ 12.21ರ ಮಹೂರ್ತದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಬಳಿಕ 12.31ರಿಂದ 2ರೊಳಗಿನ ಧನುರ್ ಲಗ್ನದಲ್ಲಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ಬಾರಿಯೂ ಅರ್ಜುನ ನಾಲ್ಕನೇ ಬಾರಿಗೆ 750 ಕೆಜಿ ತೂಕದ ಅಂಬಾರಿ  ಹೊರಲಿದ್ದಾನೆ. ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಅರಣ್ಯ ಇಲಾಖೆಯ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT